<p>ಅಣ್ಣಿಗೇರಿ: ‘ಸಮಾಜದ ಅಭಿವೃದ್ಧಿಗೆ ಗಾಣಿಗ ಸಮುದಾಯದವರ ಕೊಡುಗೆ ಅಪಾರ. ಈ ಸಮಾಜದ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡಲಾಗುವುದು’ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.</p>.<p>ಇಲ್ಲಿನ ಆದಿಕವಿ ಪಂಪಸ್ಮಾರಕ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ<br />ಅಖಿಲ ಭಾರತ ಗಾಣಿಗ ಸಂಘದ ತಾಲ್ಲೂಕು ಘಟಕದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯ<br />ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಗಾಣಿಗ ಸಂಘದಿಂದ ತಾಲ್ಲೂಕು ಕೇಂದ್ರದಲ್ಲಿ ಹೆಚ್ಚಿನ ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿ<br />ಕೊಳ್ಳಬೇಕು. ಇದಕ್ಕಾಗಿ, ವೈಯಕ್ತಿಕವಾಗಿ ನನ್ನ ತಂದೆ-ತಾಯಿ, ಸಹೋದರರ ಸ್ಮರಣಾರ್ಥ ತಲಾ ₹1 ಲಕ್ಷ ನೀಡಲಾಗುವುದು’ ಎಂದರು.</p>.<p>ಮಾಜಿ ಶಾಸಕ ಎನ್.ಎಚ್.ಕೋನ<br />ರಡ್ಡಿ ಮಾತನಾಡಿ, ‘ಗಾಣಿಗ ಸಮಾಜಕ್ಕೆ<br />ವೈಯಕ್ತಿಕವಾಗಿ ಒಂದು ಎಕರೆ ಜಮೀನನ್ನು ದಾನವಾಗಿ ನೀಡಲಾಗು<br />ವುದು’ ಎಂದು ಭರವಸೆ ನೀಡಿದರು.</p>.<p>ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ‘ಸಮಾಜದ ಇತರ ಸಮುದಾಯಗಳ ಜನರು ಗಾಣಿಗ ಸಮುದಾಯದ ಮೇಲೆ ಇಟ್ಟಿರುವ ಪ್ರೀತಿ-ವಿಶ್ವಾಸವನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ’ ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಪಟ್ಟಣದಲ್ಲಿ ಗಾಣಿಗ ಸಮುದಾಯ ಭವನ ನಿರ್ಮಾ<br />ಣಕ್ಕೆ ನಾಗರತ್ನ ಅಬ್ಬಿಗೇರಿ ಅವರು ತಮ್ಮ ತಂದೆ-ತಾಯಿ ಸ್ಮರಣಾರ್ಥ ಒಂದು ಎಕರೆ ಭೂಮಿ ದಾನವಾಗಿ ನೀಡಿದರು.</p>.<p>ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಿದ್ಧೇಶ್ವರ ಶ್ರೀ, ಜಯದೇವ ಸ್ವಾಮೀಜಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಸ್ಥಳೀಯ ದಾಸೋಹ ಮಠದ ಶಿವಕುಮಾರ ಸ್ವಾಮೀಜಿ, ಅಸುಂಡಿಯ ಶಿವಶರಣೆ ನೀಲಮ್ಮ ತಾಯಿ ಸಾನ್ನಿಧ್ಯ ವಹಿಸಿದ್ದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಾಗಪ್ಪ ಗಾಣಿಗೇರ ಅಧ್ಯಕ್ಷತೆ ವಹಿಸಿದ್ದರು.</p>.<p>ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಗುರಣ್ಣ ಗೋಡಿ, ಷಣ್ಮುಖ ಗುರಿಕಾರ, ಪ್ರಕಾಶ ಅಂಗಡಿ, ವಿನೋದ ಅಸೂಟಿ, ಅಶೋಕ ಮಜ್ಜಿಗುಡ್ಡ, ಹು-ಧಾ ಮಹಾನಗರ ಪಾಲಿಕೆ ಸದಸ್ಯ ತಿಪ್ಪಣ್ಣ ಮಜ್ಜಗಿ, ಸುಮಿತ್ರಾ ಗುಂಜಾಳ, ಚಂದ್ರಶೇಖರ ಕಾಖಂಡಕಿ, ರಾಯಪ್ಪ ಗಾಣಿಗೇರ, ಬಸವಣ್ಣೆವ್ವ ದಿಡ್ಡಿ, ವಿರುಪಾಕ್ಷಪ್ಪ ಮೇಟಿ, ಮಲಕಾಜಪ್ಪ ಕಪ್ಪತ್ತನವರ, ಜಗದೀಶ ಚವಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಣ್ಣಿಗೇರಿ: ‘ಸಮಾಜದ ಅಭಿವೃದ್ಧಿಗೆ ಗಾಣಿಗ ಸಮುದಾಯದವರ ಕೊಡುಗೆ ಅಪಾರ. ಈ ಸಮಾಜದ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡಲಾಗುವುದು’ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.</p>.<p>ಇಲ್ಲಿನ ಆದಿಕವಿ ಪಂಪಸ್ಮಾರಕ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ<br />ಅಖಿಲ ಭಾರತ ಗಾಣಿಗ ಸಂಘದ ತಾಲ್ಲೂಕು ಘಟಕದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯ<br />ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಗಾಣಿಗ ಸಂಘದಿಂದ ತಾಲ್ಲೂಕು ಕೇಂದ್ರದಲ್ಲಿ ಹೆಚ್ಚಿನ ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿ<br />ಕೊಳ್ಳಬೇಕು. ಇದಕ್ಕಾಗಿ, ವೈಯಕ್ತಿಕವಾಗಿ ನನ್ನ ತಂದೆ-ತಾಯಿ, ಸಹೋದರರ ಸ್ಮರಣಾರ್ಥ ತಲಾ ₹1 ಲಕ್ಷ ನೀಡಲಾಗುವುದು’ ಎಂದರು.</p>.<p>ಮಾಜಿ ಶಾಸಕ ಎನ್.ಎಚ್.ಕೋನ<br />ರಡ್ಡಿ ಮಾತನಾಡಿ, ‘ಗಾಣಿಗ ಸಮಾಜಕ್ಕೆ<br />ವೈಯಕ್ತಿಕವಾಗಿ ಒಂದು ಎಕರೆ ಜಮೀನನ್ನು ದಾನವಾಗಿ ನೀಡಲಾಗು<br />ವುದು’ ಎಂದು ಭರವಸೆ ನೀಡಿದರು.</p>.<p>ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ‘ಸಮಾಜದ ಇತರ ಸಮುದಾಯಗಳ ಜನರು ಗಾಣಿಗ ಸಮುದಾಯದ ಮೇಲೆ ಇಟ್ಟಿರುವ ಪ್ರೀತಿ-ವಿಶ್ವಾಸವನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ’ ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಪಟ್ಟಣದಲ್ಲಿ ಗಾಣಿಗ ಸಮುದಾಯ ಭವನ ನಿರ್ಮಾ<br />ಣಕ್ಕೆ ನಾಗರತ್ನ ಅಬ್ಬಿಗೇರಿ ಅವರು ತಮ್ಮ ತಂದೆ-ತಾಯಿ ಸ್ಮರಣಾರ್ಥ ಒಂದು ಎಕರೆ ಭೂಮಿ ದಾನವಾಗಿ ನೀಡಿದರು.</p>.<p>ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಿದ್ಧೇಶ್ವರ ಶ್ರೀ, ಜಯದೇವ ಸ್ವಾಮೀಜಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಸ್ಥಳೀಯ ದಾಸೋಹ ಮಠದ ಶಿವಕುಮಾರ ಸ್ವಾಮೀಜಿ, ಅಸುಂಡಿಯ ಶಿವಶರಣೆ ನೀಲಮ್ಮ ತಾಯಿ ಸಾನ್ನಿಧ್ಯ ವಹಿಸಿದ್ದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಾಗಪ್ಪ ಗಾಣಿಗೇರ ಅಧ್ಯಕ್ಷತೆ ವಹಿಸಿದ್ದರು.</p>.<p>ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಗುರಣ್ಣ ಗೋಡಿ, ಷಣ್ಮುಖ ಗುರಿಕಾರ, ಪ್ರಕಾಶ ಅಂಗಡಿ, ವಿನೋದ ಅಸೂಟಿ, ಅಶೋಕ ಮಜ್ಜಿಗುಡ್ಡ, ಹು-ಧಾ ಮಹಾನಗರ ಪಾಲಿಕೆ ಸದಸ್ಯ ತಿಪ್ಪಣ್ಣ ಮಜ್ಜಗಿ, ಸುಮಿತ್ರಾ ಗುಂಜಾಳ, ಚಂದ್ರಶೇಖರ ಕಾಖಂಡಕಿ, ರಾಯಪ್ಪ ಗಾಣಿಗೇರ, ಬಸವಣ್ಣೆವ್ವ ದಿಡ್ಡಿ, ವಿರುಪಾಕ್ಷಪ್ಪ ಮೇಟಿ, ಮಲಕಾಜಪ್ಪ ಕಪ್ಪತ್ತನವರ, ಜಗದೀಶ ಚವಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>