‘ನಗರದ ಬಹುತೇಕ ಕಡೆ ಸಿಆರ್ಎಫ್ ರಸ್ತೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ ದೊರೆತು, ಹಣ ಸಹ ಬಿಡುಗಡೆಯಾಗಿದೆ. ಆದರೆ, ಹಿಂದಿನ ಮೈತ್ರಿ ಸರ್ಕಾರದ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರು ₹300 ಕೋಟಿ ವೆಚ್ಚದ ರಸ್ತೆ ನಿರ್ಮಾಣಕ್ಕೆ ನೀಡಿದ್ದ ಅನುಮತಿಯನ್ನೇ ತಡೆಹಿಡಿದರು. ಇದರಿಂದಾಗಿ ಅವಳಿ ನಗರದ ಬಹುತೇಕ ರಸ್ತೆಗಳು ಹಗೆಗೆಟ್ಟು ಹೋಗಿವೆ. ತೆಗ್ಗು ಬಿದ್ದ ರಸ್ತೆಗಳ ದುರಸ್ತಿಗೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಮಳೆ ಕಡಿಮೆಯಾದ ಮೇಲೆ ಕಾಮಗಾರಿ ಆರಂಭಿಸಲಾಗುವುದು’ ಎಂದು ತಿಳಿಸಿದರು.