‘ಕಟ್ಟಡ ಕಾರ್ಮಿಕರಿಗಾಗಿ ಇಲಾಖೆಯಿಂದ ಹಲವಾರು ಉಪಯುಕ್ತ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಇವು ಅರ್ಹರಿಗೆ ಸಿಗಬೇಕೆಂದು ಇಲಾಖೆ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಇಷ್ಟರ ನಡುವೆಯೂ, ಕೆಲವರು ಸುಳ್ಳು ಮಾಹಿತಿ ನೀಡಿ, ಕಟ್ಟಡ ಕಾರ್ಮಿಕರೆಂದು ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳ ಪರಿಶೀಲನೆ, ದೂರವಾಣಿ ಮೂಲಕ ನಡೆಸಿದ ವಿಚಾರಣೆ ವೇಳೆ ಇವರು ಕಾರ್ಮಿಕರಲ್ಲವೆಂದು ತಿಳಿದುಬಂದಿದೆ. ಒಂದು ವೇಳೆ, ಇವರು ಸರ್ಕಾರದಿಂದ ಅನುಕೂಲ ಪಡೆದ ಫಲಾನುಭವಿಗಳಾಗಿದ್ದರೆ, ಎಫ್ಐಆರ್ ದಾಖಲಿಸಲಾಗುತ್ತಿತ್ತು. ಅವರು ಪಡೆದ ನೆರವನ್ನು ವಾಪಸ್ ಪಡೆಯುವ ಅವಕಾಶವೂ ಇದೆ’ ಎಂದು ವಿವರಿಸಿದರು.