<p><strong>ಹುಬ್ಬಳ್ಳಿ</strong>: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ -11ರ ವ್ಯಾಪ್ತಿಯ ವಾರ್ಡ್ 67ರ ಕಂಚಗಾರ್ ಗಲ್ಲಿ ಕ್ರಾಸ್, ಪ್ರಥಮ ಶೆಟ್ಟಿ ಓಣಿಯಲ್ಲಿ ಗುರುವಾರ ನ್ಯೂ ವಿಶಾಲ್ ಎಂಟರ್ಪ್ರೈಸಸ್ ಅಂಗಡಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 108.2 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು.</p>.<p>ಖಚಿತ ಮಾಹಿತಿ ಆಧರಿಸಿ ಅಂಗಡಿಯ ಮೊದಲನೇ ಮಹಡಿಯಲ್ಲಿನ ಗೋದಾಮಿನಲ್ಲಿ ಪ್ಲಾಸ್ಟಿಕ್ ಸಂಗ್ರಹಿಸಲಾಗಿದ ಎಂಬ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಯಿತು. ಪ್ಲಾಸ್ಟಿಕ್ ವಶಪಡಿಸಿಕೊಂಡು ಗೋದಾಮು ಸೀಜ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಆರೋಗ್ಯ ನಿರೀಕ್ಷಕ ನೂರಂದಪ್ಪ ಭಜಂತ್ರಿ, ದೀಪಿಕಾ ಆರ್., ವಾರ್ಡ್ ಸೂಪರ್ವೈಸರ್ ಮಂಜುನಾಥ್ ಇದ್ದರು.</p>.<p><strong>₹7 ಸಾವಿರ ದಂಡ:</strong> ಮಹಾನಗರ ಪಾಲಿಕೆಯ ವಲಯ ಕಚೇರಿ 3ಮತ್ತು 9ರ ವ್ಯಾಪ್ತಿಯ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 22 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು 7 ಸಾವಿರ ದಂಡ ವಿಧಿಸಿದ್ದಾರೆ.</p>.<p>ಆರೋಗ್ಯ ನಿರೀಕ್ಷಕರಾದ ಮಧುಕೇಶ್ವರ ರಾಯ್ಕರ್, ಯಲ್ಲಪ್ಪ ನೇತೃತ್ವದ ತಂಡವು ದಾಳಿ ನಡೆಸಿತು. ಮತ್ತೆ ಏಕಬಳಕೆಯ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದುದು ಕಂಡು ಬಂದರೆ ಟ್ರೇಡ್ ಲೈಸನ್ಸ್ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ -11ರ ವ್ಯಾಪ್ತಿಯ ವಾರ್ಡ್ 67ರ ಕಂಚಗಾರ್ ಗಲ್ಲಿ ಕ್ರಾಸ್, ಪ್ರಥಮ ಶೆಟ್ಟಿ ಓಣಿಯಲ್ಲಿ ಗುರುವಾರ ನ್ಯೂ ವಿಶಾಲ್ ಎಂಟರ್ಪ್ರೈಸಸ್ ಅಂಗಡಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 108.2 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು.</p>.<p>ಖಚಿತ ಮಾಹಿತಿ ಆಧರಿಸಿ ಅಂಗಡಿಯ ಮೊದಲನೇ ಮಹಡಿಯಲ್ಲಿನ ಗೋದಾಮಿನಲ್ಲಿ ಪ್ಲಾಸ್ಟಿಕ್ ಸಂಗ್ರಹಿಸಲಾಗಿದ ಎಂಬ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಯಿತು. ಪ್ಲಾಸ್ಟಿಕ್ ವಶಪಡಿಸಿಕೊಂಡು ಗೋದಾಮು ಸೀಜ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಆರೋಗ್ಯ ನಿರೀಕ್ಷಕ ನೂರಂದಪ್ಪ ಭಜಂತ್ರಿ, ದೀಪಿಕಾ ಆರ್., ವಾರ್ಡ್ ಸೂಪರ್ವೈಸರ್ ಮಂಜುನಾಥ್ ಇದ್ದರು.</p>.<p><strong>₹7 ಸಾವಿರ ದಂಡ:</strong> ಮಹಾನಗರ ಪಾಲಿಕೆಯ ವಲಯ ಕಚೇರಿ 3ಮತ್ತು 9ರ ವ್ಯಾಪ್ತಿಯ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 22 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು 7 ಸಾವಿರ ದಂಡ ವಿಧಿಸಿದ್ದಾರೆ.</p>.<p>ಆರೋಗ್ಯ ನಿರೀಕ್ಷಕರಾದ ಮಧುಕೇಶ್ವರ ರಾಯ್ಕರ್, ಯಲ್ಲಪ್ಪ ನೇತೃತ್ವದ ತಂಡವು ದಾಳಿ ನಡೆಸಿತು. ಮತ್ತೆ ಏಕಬಳಕೆಯ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದುದು ಕಂಡು ಬಂದರೆ ಟ್ರೇಡ್ ಲೈಸನ್ಸ್ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>