ಬೆಳಗಾವಿ–ತಾಳಗುಪ್ಪ ಹೆದ್ದಾರಿಯ ಮಾರ್ಗಮಧ್ಯೆ ಬರುವ ಗೋಲಿಹಳ್ಳಿ ಗ್ರಾಮದ ಬಳಿ ಖಾನಾಪುರದ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿ, ಇಬ್ಬರು ಲಾರಿ ಚಾಲಕರನ್ನು ಬಂಧಿಸಿದ್ದಾರೆ. ಬಂಧಿತರು ನೀಡಿದ ಹೇಳಿಕೆ ಆಧರಿಸಿ, ಹುಬ್ಬಳ್ಳಿಯ ಬಂಕಾಪುರ ಚೌಕದಲ್ಲಿರುವ ಬಾಲಾಜಿ ಟ್ರೇಡರ್ಸ್ ಮೇಲೆ ಖಾನಾಪುರ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.