<p><strong>ನವಲಗುಂದ:</strong> ತೋಳಗಳ ಹಿಂಡೊಂದು ಕುರಿಗಳ ಮೇಲೆ ದಾಳಿ ನಡೆಸಿ 17 ಕುರಿಗಳು ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಚೀಲಕವಾಡ ಕುಮಾರಗೋಪ್ಪ ಮದ್ಯದಲ್ಲಿರುವ ಜಮೀನಿನಲ್ಲಿ ಶುಕ್ರವಾರ ರಾತ್ರಿ ವೇಳೆ ನಡೆದಿದೆ.</p>.<p>ಗದಗ ತಾಲ್ಲೂಕಿನ ಅಸುಂಡಿ ಗ್ರಾಮದ ಸಿದ್ದಪ್ಪ ತಿರಕಪ್ಪ ವಗ್ಗಣ್ಣವರ ಎಂಬುವವರ ಕುರಿಗಳ ಹಿಂಡಿನ ಮೇಲೆ ರಾತ್ರಿ ಸಮಯದಲ್ಲಿ ತೋಳಗಳು ದಾಳಿ ಮಾಡಿವೆ. 17 ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದು, 5 ಕುರಿಗಳ ಸ್ಥಿತಿ ಚಿಂತಾಜನಕವಾಗಿದೆ.</p>.<p>ತೋಳ ದಾಳಿಯಿಂದಾಗಿ ಕುರಿ ಮಾಲೀಕರಿಗೆ ಸುಮಾರು ₹2ಲಕ್ಷ ನಷ್ಟ ಸಂಭವಿಸಿದೆ. ಅತಿವೃಷ್ಟಿ ಅನಾವೃಷ್ಟಿಯಿಂದ ಬಳಲುತ್ತಿದ್ದ ಕುರಿಗಾಹಿ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.</p>.<p>ಸ್ಥಳಕ್ಕೆ ನವಲಗುಂದ ಪಶು ವೈದ್ಯರು ಹಾಗೂ ಪೊಲೀಸರು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಪೊಲೀಸ್ ತನಿಖೆ ಮುಂದುವರೆದಿದೆ.</p>.<p>ಕುರಿಗಳಿಂದಲೇ ನಮ್ಮ ಕುಟುಂಬದ ಜೀವನ ಸಾಗುತ್ತಿತ್ತು. ಈ ಘಟನೆಯಿಂದ ನಮ್ಮ ಪರಿಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದೆ. ದಯವಿಟ್ಟು ನಮಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಕುರಿ ಮಾಲೀಕ ಸಿದ್ದಪ್ಪ ತಿರಕಪ್ಪ ವಗ್ಗಣ್ಣವರ ಕೇಳಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ತೋಳಗಳ ಹಿಂಡೊಂದು ಕುರಿಗಳ ಮೇಲೆ ದಾಳಿ ನಡೆಸಿ 17 ಕುರಿಗಳು ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಚೀಲಕವಾಡ ಕುಮಾರಗೋಪ್ಪ ಮದ್ಯದಲ್ಲಿರುವ ಜಮೀನಿನಲ್ಲಿ ಶುಕ್ರವಾರ ರಾತ್ರಿ ವೇಳೆ ನಡೆದಿದೆ.</p>.<p>ಗದಗ ತಾಲ್ಲೂಕಿನ ಅಸುಂಡಿ ಗ್ರಾಮದ ಸಿದ್ದಪ್ಪ ತಿರಕಪ್ಪ ವಗ್ಗಣ್ಣವರ ಎಂಬುವವರ ಕುರಿಗಳ ಹಿಂಡಿನ ಮೇಲೆ ರಾತ್ರಿ ಸಮಯದಲ್ಲಿ ತೋಳಗಳು ದಾಳಿ ಮಾಡಿವೆ. 17 ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದು, 5 ಕುರಿಗಳ ಸ್ಥಿತಿ ಚಿಂತಾಜನಕವಾಗಿದೆ.</p>.<p>ತೋಳ ದಾಳಿಯಿಂದಾಗಿ ಕುರಿ ಮಾಲೀಕರಿಗೆ ಸುಮಾರು ₹2ಲಕ್ಷ ನಷ್ಟ ಸಂಭವಿಸಿದೆ. ಅತಿವೃಷ್ಟಿ ಅನಾವೃಷ್ಟಿಯಿಂದ ಬಳಲುತ್ತಿದ್ದ ಕುರಿಗಾಹಿ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.</p>.<p>ಸ್ಥಳಕ್ಕೆ ನವಲಗುಂದ ಪಶು ವೈದ್ಯರು ಹಾಗೂ ಪೊಲೀಸರು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಪೊಲೀಸ್ ತನಿಖೆ ಮುಂದುವರೆದಿದೆ.</p>.<p>ಕುರಿಗಳಿಂದಲೇ ನಮ್ಮ ಕುಟುಂಬದ ಜೀವನ ಸಾಗುತ್ತಿತ್ತು. ಈ ಘಟನೆಯಿಂದ ನಮ್ಮ ಪರಿಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದೆ. ದಯವಿಟ್ಟು ನಮಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಕುರಿ ಮಾಲೀಕ ಸಿದ್ದಪ್ಪ ತಿರಕಪ್ಪ ವಗ್ಗಣ್ಣವರ ಕೇಳಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>