ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ಎಸ್ ಡಿ ಪಿ ಐ ಹಾಗೂ ಪಿ ಎಫ್ ಐ ಕಾರ್ಯಕರ್ತರನ್ನು ಬಂಧಿಸಿದ್ದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಈ ಇಬ್ಬರು ಪಾಲ್ಗೊಂಡಿದ್ದರು. ಅಲ್ಲಿ ಪೊಲೀಸ್ ಅಧಿಕಾರಿಗಳನ್ನು ತಳ್ಳಿ, ಗಲಾಟೆ ಗೆ ಪ್ರಚೋದಿಸಿದ್ದರು. ಈ ಇಬ್ಬರನ್ನು ಬಂಧಿಸುವಂತೆ ಕಮರಿಪೇಟೆ ಪೋಲಿಸರು ಜಿಲ್ಲಾ ಪೊಲೀಸರನ್ನು ಕೇಳಿದ್ದರು. ಅದರಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.