ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಸಂಸ್ಥೆಯ ಸಿಬ್ಬಂದಿ ಕೆಲಸ ನಿರ್ವಹಿಸಲು ಅಡ್ಡಿ ಪಡಿಸುತ್ತಿರುವ ಕೆಲ ಉದ್ಯೋಗಿಗಳನ್ನು ವರ್ಗಾವಣೆ ಮಾಡಲಾಗಿದೆ. ತರಬೇತಿ ಸಿಬ್ಬಂದಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಕೆಲವರನ್ನು ವಜಾ ಕೂಡ ಮಾಡಲಾಗಿದೆ. ಇನ್ನು ಕೆಲ ತರಬೇತಿ ಸಿಬ್ಬಂದಿಗೆ ಒಂದೆರೆಡು ದಿನಗಳಲ್ಲಿ ವಜಾ ಆದೇಶ ಕಳುಹಿಸಲಾಗುತ್ತದೆ ಎಂದರು.