ರೈತರು ಕಚೇರಿಗೆ ಅಲೆದಾಡಬಾರದೆಂಬ ಉದ್ದೇಶದಿಂದ ಯೋಜನೆ ಜಾರಿಗೆ ತರಲಾಗಿದ್ದು, ರೈತರೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ತಹಶೀಲ್ದಾರ್ ಅಶೋಕ ಶಿಗ್ಗಾಂವಿ ಮಾತನಾಡಿ, ತಾಲ್ಲೂಕಿನ 28 ಸಾವಿರ ರೈತರ ಮೆನ ಬಾಗಿಲಿಗೆ ದಾಖಲೆಗಳನ್ನು ತಲುಪಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಎಲ್ಲರಿಗೂ ದಾಖಲೆ ತಲುಪಲಿದೆ. ಯಾರಿಗಾದರೂ ತಲುಪದಿದ್ದರೆ ಅವರು ನಮ್ಮನ್ನು ಸಂಪರ್ಕಿಸಬೇಕೆಂದು ಹೇಳಿದರು.