‘ಮೀಸಲಾತಿ ಕಲ್ಪಿಸಿದರೆ ಮುಖ್ಯಮಂತ್ರಿಗೆ ಸನ್ಮಾನ ಮಾಡಲಾಗುವುದು. ಇಲ್ಲದಿದ್ದರೆ ಅವಮಾನ ಮಾಡಲೂ ಹಿಂಜರಿಯುವುದಿಲ್ಲ. ಇದು ಕೊನೆಯ ಹಂತದ ಮಾಡು ಇಲ್ಲವೆ ಮಡಿ ಹೋರಾಟ’ ಎಂದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಪಂಚಮಸಾಲಿ ಸಮಾಜದ ಬೆಂಬಲ ಇಲ್ಲದೆ ಯಾವ ಪಕ್ಷಗಳೂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಮೀಸಲಾತಿ ಕಲ್ಪಿಸುವವರಿಗೆ 2023ರ ಚುನಾವಣೆಯಲ್ಲಿ ನಮ್ಮ ಸಹಕಾರ ಇರುತ್ತದೆ’ ಎಂದು ಹೇಳಿದರು.