ಗುಡಿಸಾಗರ ಗ್ರಾಮದ ಶರಣಪ್ಪ ಮೇಟಿ, ಬೀರಪ್ಪ ಪೂಜಾರ ಹಾಗೂ ಗಂಗವ್ವ ಕಡೆಮನಿ ಪ್ರವಾಹದಲ್ಲಿ ಸಿಲುಕಿದ್ದಾರೆ. ಬೆಳಿಗ್ಗೆ ಹೊಲಕ್ಕೆ ಹೋಗಿದ್ದ ಅವರು ಸಂಜೆ ಮನೆಗೆ ಮರಳುವ ವೇಳೆ ಹಳ್ಳದ ಪ್ರವಾಹ ಹೆಚ್ಚಾಗಿದೆ. ಮೂವರನ್ನು ರಕ್ಷಿಸಲು ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ದಡದಲ್ಲಿ ಸಿಲುಕಿದವರಿಗೆ ಪೊಲೀಸ್ ಸಿಬ್ಬಂದಿ ಧೈರ್ಯ ತುಂಬಿದರು.