<p><strong>ಹುಬ್ಬಳ್ಳಿ</strong>: ‘ಕೃಷ್ಣಾ ಕಾಲೊನಿ ನಿವಾಸಿಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 350 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇದೇ ಯೋಜನೆಯಡಿ, ಮುಂದಿನ ಎರಡ್ಮೂರು ವರ್ಷಗಳಲ್ಲಿ ದೇಶದ ಎಲ್ಲ ಬಡವರಿಗೆ ಮನೆ ನಿರ್ಮಿಸಿ ಕೊಡಲು ಪ್ರಧಾನಿ ಮೋದಿ ಅವರು ಮುಂದಾಗಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಹಳೇ ಹುಬ್ಬಳ್ಳಿಯ ಕೃಷ್ಣಾ ಕಾಲೊನಿ ಉದ್ಯಾನದಲ್ಲಿ ಭಾನುವಾರ ಸ್ಥಳೀಯ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಅವರ ‘ಮನದ ಮಾತು’ ಆಲಿಸಿ ಮಾತನಾಡಿದ ಅವರು, ‘ಮೋದಿ ಅವರು ಬಡವರು, ದಲಿತರು ಹಾಗೂ ಅಸಹಾಯಕರ ಸ್ವಾವಲಂಬನೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ’ ಎಂದರು.</p>.<p>‘ಸೌಭಾಗ್ಯ ಯೋಜನೆಯಡಿ ಬಡವರಿಗೆ ಉಚಿತ ವಿದ್ಯುತ್ನೊಂದಿಗೆ, ಕಡಿಮೆ ದರದಲ್ಲಿ ಎಲ್ಇಡಿ ಬಲ್ಬ್ ಒದಗಿಸಲಾಗಿದೆ. ಕೋವಿಡ್–19 ಹಿನ್ನೆಲೆಯಲ್ಲಿ ಎರಡು ವರ್ಷ ಉಚಿತವಾಗಿ ಪಡಿತರ ನೀಡಲಾಗಿದೆ. ಬೀದಿ ವ್ಯಾಪಾರಸ್ಥರಿಗೆ ಬ್ಯಾಂಕ್ ಮೂಲಕ ಸ್ವನಿಧಿ ಯೋಜನೆಯಡಿ ₹50 ಸಾವಿರ ಸಾಲ ಕೊಡಲಾಗುತ್ತಿದೆ’ ಎಂದರು.</p>.<p><strong>ಶೀಘ್ರ ನಿರಂತರ ನೀರು:</strong> ‘ಅವಳಿನಗರದ ಎಲ್ಲ ವಾರ್ಡ್ಗಳಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಕೆಯ ವ್ಯವಸ್ಥೆ ಮಾಡಲಾಗುತ್ತಿದೆ. ಆನಂದನಗರದ ಬಳಿ ಹೃದ್ರೋಗ ಆಸ್ಪತ್ರೆ, ರಾಷ್ಟ್ರಮಟ್ಟದ ಕ್ರೀಡಾಗ್ರಾಮ ನಿರ್ಮಿಸಲಾಗುವುದು. ಜೊತೆಗೆ, ಇನ್ನೂ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಶಾಸಕ ಅರವಿಂದ ಬೆಲ್ಲದ ಮಾತನಾಡಿ, ‘ಪ್ರಧಾನಿ ಮೋದಿ ಅವರು ಅಸಾಮಾನ್ಯರು. ಅವರ ಮನಸ್ಸು ಸದಾ ಬಡವರು ಮತ್ತು ಸಾಮಾನ್ಯರಿಗಾಗಿ ಮಿಡಿಯುತ್ತದೆ. ತಮ್ಮ ಮನದ ಮಾತಿನ ಮೂಲಕ ಈ ದೇಶದ ಸಂಸ್ಕೃತಿ, ವೈವಿಧ್ಯತೆ, ಜನರ ಸಾಧನೆ ಬಗ್ಗೆ ಹೇಳುವ ಅವರು, ಉಳಿದವರಿಗೂ ಪ್ರೇರಣೆ ನೀಡುವ ಕೆಲಸ ಮಾಡುತ್ತಿದ್ದಾರೆ’ ಎಂದು ಅಭಿಪ್ರಾಯಪಟ್ಟರು.</p>.<p>ಮಹಾನಗರ ಪಾಲಿಕೆ ಸದಸ್ಯ ಸತೀಶ ಹಾನಗಲ್ಲ, ಮಹೇಶ ಚಂದರಗಿ, ಮಹೇಶ ಘಾಟಗೆ, ಅಶೋಕ ವಾಲಿಕಾರ, ಬಸವರಾಜ ಶಿರಹಟ್ಟಿ, ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಕೃಷ್ಣಾ ಕಾಲೊನಿ ನಿವಾಸಿಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 350 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇದೇ ಯೋಜನೆಯಡಿ, ಮುಂದಿನ ಎರಡ್ಮೂರು ವರ್ಷಗಳಲ್ಲಿ ದೇಶದ ಎಲ್ಲ ಬಡವರಿಗೆ ಮನೆ ನಿರ್ಮಿಸಿ ಕೊಡಲು ಪ್ರಧಾನಿ ಮೋದಿ ಅವರು ಮುಂದಾಗಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಹಳೇ ಹುಬ್ಬಳ್ಳಿಯ ಕೃಷ್ಣಾ ಕಾಲೊನಿ ಉದ್ಯಾನದಲ್ಲಿ ಭಾನುವಾರ ಸ್ಥಳೀಯ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಅವರ ‘ಮನದ ಮಾತು’ ಆಲಿಸಿ ಮಾತನಾಡಿದ ಅವರು, ‘ಮೋದಿ ಅವರು ಬಡವರು, ದಲಿತರು ಹಾಗೂ ಅಸಹಾಯಕರ ಸ್ವಾವಲಂಬನೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ’ ಎಂದರು.</p>.<p>‘ಸೌಭಾಗ್ಯ ಯೋಜನೆಯಡಿ ಬಡವರಿಗೆ ಉಚಿತ ವಿದ್ಯುತ್ನೊಂದಿಗೆ, ಕಡಿಮೆ ದರದಲ್ಲಿ ಎಲ್ಇಡಿ ಬಲ್ಬ್ ಒದಗಿಸಲಾಗಿದೆ. ಕೋವಿಡ್–19 ಹಿನ್ನೆಲೆಯಲ್ಲಿ ಎರಡು ವರ್ಷ ಉಚಿತವಾಗಿ ಪಡಿತರ ನೀಡಲಾಗಿದೆ. ಬೀದಿ ವ್ಯಾಪಾರಸ್ಥರಿಗೆ ಬ್ಯಾಂಕ್ ಮೂಲಕ ಸ್ವನಿಧಿ ಯೋಜನೆಯಡಿ ₹50 ಸಾವಿರ ಸಾಲ ಕೊಡಲಾಗುತ್ತಿದೆ’ ಎಂದರು.</p>.<p><strong>ಶೀಘ್ರ ನಿರಂತರ ನೀರು:</strong> ‘ಅವಳಿನಗರದ ಎಲ್ಲ ವಾರ್ಡ್ಗಳಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಕೆಯ ವ್ಯವಸ್ಥೆ ಮಾಡಲಾಗುತ್ತಿದೆ. ಆನಂದನಗರದ ಬಳಿ ಹೃದ್ರೋಗ ಆಸ್ಪತ್ರೆ, ರಾಷ್ಟ್ರಮಟ್ಟದ ಕ್ರೀಡಾಗ್ರಾಮ ನಿರ್ಮಿಸಲಾಗುವುದು. ಜೊತೆಗೆ, ಇನ್ನೂ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಶಾಸಕ ಅರವಿಂದ ಬೆಲ್ಲದ ಮಾತನಾಡಿ, ‘ಪ್ರಧಾನಿ ಮೋದಿ ಅವರು ಅಸಾಮಾನ್ಯರು. ಅವರ ಮನಸ್ಸು ಸದಾ ಬಡವರು ಮತ್ತು ಸಾಮಾನ್ಯರಿಗಾಗಿ ಮಿಡಿಯುತ್ತದೆ. ತಮ್ಮ ಮನದ ಮಾತಿನ ಮೂಲಕ ಈ ದೇಶದ ಸಂಸ್ಕೃತಿ, ವೈವಿಧ್ಯತೆ, ಜನರ ಸಾಧನೆ ಬಗ್ಗೆ ಹೇಳುವ ಅವರು, ಉಳಿದವರಿಗೂ ಪ್ರೇರಣೆ ನೀಡುವ ಕೆಲಸ ಮಾಡುತ್ತಿದ್ದಾರೆ’ ಎಂದು ಅಭಿಪ್ರಾಯಪಟ್ಟರು.</p>.<p>ಮಹಾನಗರ ಪಾಲಿಕೆ ಸದಸ್ಯ ಸತೀಶ ಹಾನಗಲ್ಲ, ಮಹೇಶ ಚಂದರಗಿ, ಮಹೇಶ ಘಾಟಗೆ, ಅಶೋಕ ವಾಲಿಕಾರ, ಬಸವರಾಜ ಶಿರಹಟ್ಟಿ, ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>