<p><strong>ಹುಬ್ಬಳ್ಳಿ:</strong> ಸಾಲ ಬಾಧೆ ಮತ್ತು ಬೆಳೆ ನಷ್ಟದಿಂದ ಬೇಸತ್ತು ಗುರುವಾರದಿಂದ ಶನಿವಾರದ ಅವಧಿಯಲ್ಲಿ ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ತಲಾ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಹಾವೇರಿ ಜಿಲ್ಲೆಯ ಹೊಸೂರು ಸಮೀಪದ ಯತ್ತಿನಹಳ್ಳಿ ಗ್ರಾಮದಲ್ಲಿ ಹೆಗ್ಗಪ್ಪ ದರ್ಗಪ್ಪ ಲಮಾಣಿ (60) ಮತ್ತು ಸವಣೂರು ತಾಲ್ಲೂಕಿನ ಚವಡಾಳ ಗ್ರಾಮದಲ್ಲಿ ಗದಿಗೆಪ್ಪ ಚನ್ನಬಸಪ್ಪ ಗೊಲ್ಲರ (43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಡಂಬಳ ಹೋಬಳಿಯ ಮೇವುಂಡಿ ಗ್ರಾಮದ ರೈತ ಕಾಶಿಂಸಾಬ ಪೀರಸಾಬ ನಧಾಪ (ಪಿಂಜಾರ) (37) ಕಾಲುವೆಗೆ ಹಾರಿದರೆ, ಮುಂಡರಗಿ ತಾಲ್ಲೂಕಿನ ಬರದೂರು ಗ್ರಾಮದ ಮಂಜಪ್ಪ ಈಶ್ವರಪ್ಪ ಹೆಬಸೂರು (47) ನೇಣು ಹಾಕಿಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ರೈತರು ಸಾಲ ಬಾಧೆ ಮತ್ತು ಬೆಳೆ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬ ಸದಸ್ಯರು ಗ್ರಾಮದ ವ್ಯಾಪ್ತಿಯ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಸಾಲ ಬಾಧೆ ಮತ್ತು ಬೆಳೆ ನಷ್ಟದಿಂದ ಬೇಸತ್ತು ಗುರುವಾರದಿಂದ ಶನಿವಾರದ ಅವಧಿಯಲ್ಲಿ ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ತಲಾ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಹಾವೇರಿ ಜಿಲ್ಲೆಯ ಹೊಸೂರು ಸಮೀಪದ ಯತ್ತಿನಹಳ್ಳಿ ಗ್ರಾಮದಲ್ಲಿ ಹೆಗ್ಗಪ್ಪ ದರ್ಗಪ್ಪ ಲಮಾಣಿ (60) ಮತ್ತು ಸವಣೂರು ತಾಲ್ಲೂಕಿನ ಚವಡಾಳ ಗ್ರಾಮದಲ್ಲಿ ಗದಿಗೆಪ್ಪ ಚನ್ನಬಸಪ್ಪ ಗೊಲ್ಲರ (43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಡಂಬಳ ಹೋಬಳಿಯ ಮೇವುಂಡಿ ಗ್ರಾಮದ ರೈತ ಕಾಶಿಂಸಾಬ ಪೀರಸಾಬ ನಧಾಪ (ಪಿಂಜಾರ) (37) ಕಾಲುವೆಗೆ ಹಾರಿದರೆ, ಮುಂಡರಗಿ ತಾಲ್ಲೂಕಿನ ಬರದೂರು ಗ್ರಾಮದ ಮಂಜಪ್ಪ ಈಶ್ವರಪ್ಪ ಹೆಬಸೂರು (47) ನೇಣು ಹಾಕಿಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ರೈತರು ಸಾಲ ಬಾಧೆ ಮತ್ತು ಬೆಳೆ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬ ಸದಸ್ಯರು ಗ್ರಾಮದ ವ್ಯಾಪ್ತಿಯ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>