ಹುಬ್ಬಳ್ಳಿ: ಮಂಗಳೂರಿನಲ್ಲಿ ಕಟ್ಟಡ ನಿರ್ಮಾಣ, ಪ್ಲಂಬಿಂಗ್ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿಕೊಂಡಿದ್ದ ಅಂದಾಜು 50 ಅಂತರರಾಜ್ಯ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುವುದಕ್ಕಾಗಿ ಶನಿವಾರ ಹುಬ್ಬಳ್ಳಿಗೆ ಬಂದಿದ್ದಾರೆ. ಮಧ್ಯಪ್ರದೇಶ, ಉತ್ತರಪ್ರದೇಶ, ರಾಜಸ್ಥಾನಗಳ ಈ ಕಾರ್ಮಿಕರು ಮಂಗಳೂರಿನಿಂದ ನಡೆದುಕೊಂಡು ಹುಬ್ಬಳ್ಳಿಯತ್ತ ಪಯಣ ಬೆಳೆಸಿದ್ದಾರೆ. ಮಾರ್ಗ ಮಧ್ಯೆ ಸಿಕ್ಕ ವಾಹನಗಳನ್ನು ಹತ್ತಿಕೊಂಡು ಗೋಕುಲ ರಸ್ತೆಯಲ್ಲಿರುವ ಬಸ್ ನಿಲ್ದಾಣವನ್ನು ಬೆಳಿಗ್ಗೆ ತಲುಪಿಸಿದ್ದಾರೆ.