<p><strong>ಅಣ್ಣಿಗೇರಿ: </strong>ಪಟ್ಟಣದ ಜನರಿಗೆ 24X7 ನೀರುಒದಗಿಸುವ ಉದ್ದೇಶದಿಂದ ಸರ್ಕಾರ ಈಗಾಗಲೇ ₹54 ಕೋಟಿ ಅನುದಾನ ಮಂಜೂರು ಮಾಡಿದ್ದು,ಶೀಘ್ರದಲ್ಲಿಯೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಕರ್ನಾಟಕನಗರ ಮೂಲಸೌಕರ್ಯ ಅಭಿವೃದ್ದಿ ನಿಗಮ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಶಂಕರಪಾಟೀಲ ಮುನೇನಕೊಪ್ಪ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ’ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಒದಗಿಸುವ ನೂತನ ಕೆರೆ ಕಾಮಗಾರಿ ಮುಕ್ತಾಯದ ಹಂತ ತಲುಪಿದೆ. ತಾಲ್ಲೂಕು ಪಂಚಾಯ್ತಿ ಹೊಸ ಕಟ್ಟಡಕ್ಕೆ ₹50 ಲಕ್ಷವನ್ನು ಸರ್ಕಾರ ನೀಡಿದೆ.ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅಣ್ಣಿಗೇರಿ-ಭದ್ರಾಪೂರ ನಡುವಿನ7 ಕಿ.ಮೀ ಚಕ್ಕಡಿ ರಸ್ತೆ ನಿರ್ಮಾಣಕ್ಕೆ ₹8.40 ಕೋಟಿ ಮತ್ತುಅಣ್ಣಿಗೇರಿ-ಶಿಶ್ವಿನಹಳ್ಳಿ ಚಕ್ಕಡಿ ರಸ್ತೆ ನಿರ್ಮಾಣಕ್ಕೆ ₹2.5 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಕೂಡ ಕರೆಯಲಾಗಿದೆ’ ಎಂದು ತಿಳಿಸಿದರು.</p>.<p>’ಕ್ರೀಡಾ ಚಟುವಟಿಕೆಗಳನ್ನು ನಡೆಸಲು ₹5 ಕೋಟಿ ಅನುದಾನಕ್ಕೆ ಮಂಜೂರಾತಿ ಲಭಿಸಿದೆ.ನೂತನ ತಾಲ್ಲೂಕು ಕೇಂದ್ರಕ್ಕೆ ಬರಬೇಕಾದ ಎಲ್ಲ ಕಚೇರಿಗಳು ಆದಷ್ಟು ಬೇಗನೆ ಬರಲಿವೆ.ಕ್ಷೇತ್ರದಲ್ಲಿ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಅಣ್ಣಿಗೇರಿ ಪಟ್ಟಣ ಕೊರೊನಾ ಮುಕ್ತವಾಗಿರುವುದು ಸಂತೋಷದ ಸಂಗತಿ’ ಎಂದರು.</p>.<p>ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ, ಶಿವಯೋಗಿ ಸುರಕೋಡ, ಮಹೇಶ ದೇಸಾಯಿ, ಡಾ.ಅಶೋಕ ಅಗರವಾಲ್, ಮುಖ್ಯಾಧಿಕಾರಿ ಕೆ.ಎಫ್.ಕಟಗಿ, ಆರ್.ಡಿ.ಕುಲಕರ್ಣಿ, ಶಿವಾನಂದ ಹೊಸಳ್ಳಿ, ಬಸವರಾಜ ಯಳವತ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಣ್ಣಿಗೇರಿ: </strong>ಪಟ್ಟಣದ ಜನರಿಗೆ 24X7 ನೀರುಒದಗಿಸುವ ಉದ್ದೇಶದಿಂದ ಸರ್ಕಾರ ಈಗಾಗಲೇ ₹54 ಕೋಟಿ ಅನುದಾನ ಮಂಜೂರು ಮಾಡಿದ್ದು,ಶೀಘ್ರದಲ್ಲಿಯೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಕರ್ನಾಟಕನಗರ ಮೂಲಸೌಕರ್ಯ ಅಭಿವೃದ್ದಿ ನಿಗಮ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಶಂಕರಪಾಟೀಲ ಮುನೇನಕೊಪ್ಪ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ’ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಒದಗಿಸುವ ನೂತನ ಕೆರೆ ಕಾಮಗಾರಿ ಮುಕ್ತಾಯದ ಹಂತ ತಲುಪಿದೆ. ತಾಲ್ಲೂಕು ಪಂಚಾಯ್ತಿ ಹೊಸ ಕಟ್ಟಡಕ್ಕೆ ₹50 ಲಕ್ಷವನ್ನು ಸರ್ಕಾರ ನೀಡಿದೆ.ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅಣ್ಣಿಗೇರಿ-ಭದ್ರಾಪೂರ ನಡುವಿನ7 ಕಿ.ಮೀ ಚಕ್ಕಡಿ ರಸ್ತೆ ನಿರ್ಮಾಣಕ್ಕೆ ₹8.40 ಕೋಟಿ ಮತ್ತುಅಣ್ಣಿಗೇರಿ-ಶಿಶ್ವಿನಹಳ್ಳಿ ಚಕ್ಕಡಿ ರಸ್ತೆ ನಿರ್ಮಾಣಕ್ಕೆ ₹2.5 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಕೂಡ ಕರೆಯಲಾಗಿದೆ’ ಎಂದು ತಿಳಿಸಿದರು.</p>.<p>’ಕ್ರೀಡಾ ಚಟುವಟಿಕೆಗಳನ್ನು ನಡೆಸಲು ₹5 ಕೋಟಿ ಅನುದಾನಕ್ಕೆ ಮಂಜೂರಾತಿ ಲಭಿಸಿದೆ.ನೂತನ ತಾಲ್ಲೂಕು ಕೇಂದ್ರಕ್ಕೆ ಬರಬೇಕಾದ ಎಲ್ಲ ಕಚೇರಿಗಳು ಆದಷ್ಟು ಬೇಗನೆ ಬರಲಿವೆ.ಕ್ಷೇತ್ರದಲ್ಲಿ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಅಣ್ಣಿಗೇರಿ ಪಟ್ಟಣ ಕೊರೊನಾ ಮುಕ್ತವಾಗಿರುವುದು ಸಂತೋಷದ ಸಂಗತಿ’ ಎಂದರು.</p>.<p>ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ, ಶಿವಯೋಗಿ ಸುರಕೋಡ, ಮಹೇಶ ದೇಸಾಯಿ, ಡಾ.ಅಶೋಕ ಅಗರವಾಲ್, ಮುಖ್ಯಾಧಿಕಾರಿ ಕೆ.ಎಫ್.ಕಟಗಿ, ಆರ್.ಡಿ.ಕುಲಕರ್ಣಿ, ಶಿವಾನಂದ ಹೊಸಳ್ಳಿ, ಬಸವರಾಜ ಯಳವತ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>