<p><strong>ಧಾರವಾಡ:</strong> ‘ರಾಜ್ಯದ ಬಿಜೆಪಿ ನಾಯಕರ ಕುಮ್ಮಕ್ಕಿನಿಂದಾಗಿ ಗೋವಾ ರಾಜಕೀಯ ಮುಖಂಡರು ಕಳೆದು ಒಂದು ತಿಂಗಳಲ್ಲಿ ಕಳಸಾ ಬಂಡೂರಿ ಉಗಮ ಸ್ಥಾನಕ್ಕೆ ಮೂರು ಬಾರಿ ಭೇಟಿ ನೀಡಿದೆ’ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಆರೋಪಿಸಿದರು.</p>.<p>‘ಗೋವಾ ಮುಖ್ಯಮಂತ್ರಿ ಮನೋಹರ ಪರ್ರೀಕರ್ ಅವರು ರಾಜ್ಯ ಬಿಜೆಪಿ ಪರಿವರ್ತನಾ ಯಾತ್ರೆ ಸಂದರ್ಭದಲ್ಲಿ ಬರೆದಿರುವ ಪತ್ರವೇ ಇಂದು ನಮಗೆ ಮಾರಕವಾಗಿದೆ. ಅದಾದ ನಂತರ ಮೂರು ತಂಡಗಳು ಅಲ್ಲಿವೆ ಭೇಟಿ ನೀಡಿವೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಭೇಟಿ ನೀಡಿದವರು, ರಾಜ್ಯದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿದ್ದರೂ ರಾಜ್ಯ ಬಿಜೆಪಿ ಮುಖಂಡರು ಅದಕ್ಕೆ ಪ್ರತಿಕ್ರಿಯೆ ನೀಡದಿರುವುದನ್ನು ನೋಡಿದರೆ ಅವರಿಗೆ ನಮ್ಮ ರಾಜ್ಯದ ಜನರ ಹಿತಕ್ಕಿಂತ, ಗೋವಾ ಬಿಜೆಪಿಯ ಹಿತವೇ ಮುಖ್ಯ ಎನ್ನುವಂತಾಗಿದೆ’ ಎಂದು ಟೀಕಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿದ್ದ ಸರ್ವ ಪಕ್ಷ ಸಭೆಯನ್ನು ಬಹಿಷ್ಕರಿಸುವ ಮೂಲಕ ಬಿಜೆಪಿ ನಾಯಕರು ಗೋವಾ ಹಿತ ಕಾಪಾಡಲು ಮುಂದಾಗಿದ್ದಾರೆ ಎಂಬ ಅನುಮಾನಕ್ಕೆ ಪುಷ್ಟಿ ನೀಡಿದ್ದಾರೆ. ರಾಜ್ಯದ ಜಲದ ಬಗ್ಗೆ ಕಾಳಜಿಯಿದ್ದರೆ ನ್ಯಾಯ ಮಂಡಳಿ ಹೊರಗಡೆ ಸಂಧಾನಕ್ಕೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ರಾಜ್ಯದ ಬಿಜೆಪಿ ನಾಯಕರ ಕುಮ್ಮಕ್ಕಿನಿಂದಾಗಿ ಗೋವಾ ರಾಜಕೀಯ ಮುಖಂಡರು ಕಳೆದು ಒಂದು ತಿಂಗಳಲ್ಲಿ ಕಳಸಾ ಬಂಡೂರಿ ಉಗಮ ಸ್ಥಾನಕ್ಕೆ ಮೂರು ಬಾರಿ ಭೇಟಿ ನೀಡಿದೆ’ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಆರೋಪಿಸಿದರು.</p>.<p>‘ಗೋವಾ ಮುಖ್ಯಮಂತ್ರಿ ಮನೋಹರ ಪರ್ರೀಕರ್ ಅವರು ರಾಜ್ಯ ಬಿಜೆಪಿ ಪರಿವರ್ತನಾ ಯಾತ್ರೆ ಸಂದರ್ಭದಲ್ಲಿ ಬರೆದಿರುವ ಪತ್ರವೇ ಇಂದು ನಮಗೆ ಮಾರಕವಾಗಿದೆ. ಅದಾದ ನಂತರ ಮೂರು ತಂಡಗಳು ಅಲ್ಲಿವೆ ಭೇಟಿ ನೀಡಿವೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಭೇಟಿ ನೀಡಿದವರು, ರಾಜ್ಯದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿದ್ದರೂ ರಾಜ್ಯ ಬಿಜೆಪಿ ಮುಖಂಡರು ಅದಕ್ಕೆ ಪ್ರತಿಕ್ರಿಯೆ ನೀಡದಿರುವುದನ್ನು ನೋಡಿದರೆ ಅವರಿಗೆ ನಮ್ಮ ರಾಜ್ಯದ ಜನರ ಹಿತಕ್ಕಿಂತ, ಗೋವಾ ಬಿಜೆಪಿಯ ಹಿತವೇ ಮುಖ್ಯ ಎನ್ನುವಂತಾಗಿದೆ’ ಎಂದು ಟೀಕಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿದ್ದ ಸರ್ವ ಪಕ್ಷ ಸಭೆಯನ್ನು ಬಹಿಷ್ಕರಿಸುವ ಮೂಲಕ ಬಿಜೆಪಿ ನಾಯಕರು ಗೋವಾ ಹಿತ ಕಾಪಾಡಲು ಮುಂದಾಗಿದ್ದಾರೆ ಎಂಬ ಅನುಮಾನಕ್ಕೆ ಪುಷ್ಟಿ ನೀಡಿದ್ದಾರೆ. ರಾಜ್ಯದ ಜಲದ ಬಗ್ಗೆ ಕಾಳಜಿಯಿದ್ದರೆ ನ್ಯಾಯ ಮಂಡಳಿ ಹೊರಗಡೆ ಸಂಧಾನಕ್ಕೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>