ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಅಧ್ಯಕ್ಷ ನಾಗೇಶ್ ಎಚ್.ಎ., ಹೊಸ ನ್ಯಾಯಾಲಯಗಳಿಗೆ ಸೂಕ್ತ ಸಿಬ್ಬಂದಿ ನೇಮಕ ಮಾಡಬೇಕು. ನೂತನ ಪಿಂಚಣಿ ವ್ಯವಸ್ಥೆಯನ್ನು ರದ್ದು ಪಡಿಸಬೇಕು. ನೌಕರರ ಅಂತರ ಜಿಲ್ಲಾ ವರ್ಗಾವಣೆ ನೀತಿ ಜಾರಿಗೊಳಿಸಬೇಕು. ನೌಕರರ ಕುಂದುಕೊರತೆಗಳನ್ನು ಆಲಿಸಲು ಜಿಲ್ಲಾ ಮಟ್ಟದಲ್ಲಿ ಕುಂದುಕೊರತೆ ಸಮಿತಿ ರಚಿಸಬೇಕು. ನೌಕರರಿಗೆ ನೀಡುವ ಸೇವಾ ಸೌಲಭ್ಯಗಳನ್ನು ವಿಳಂಬವಿಲ್ಲದೆ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂಬ ಬೇಡಿಕೆಗಳ ಈಡೇರಿಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ ಅವರಿಗೆ ಮನವಿ ಸಲ್ಲಿಸಿದರು.