<p>ಹುಬ್ಬಳ್ಳಿ: ‘ಸಾರಿಗೆ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಶ್ರೀರಾಮಲು ಅವರ ಗಮನಕ್ಕೆ ತಂದು, ಪರಿಷ್ಕರಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು’ ಎಂದು ಶಾಸಕ ಜಗದೀಶ ಶೆಟ್ಟರ್ ಭರವಸೆ ನೀಡಿದರು.</p>.<p>ನಗರದ ಗೋಕುಲ ರಸ್ತೆಯ ವಿಶ್ವಶ್ರಮ ಚೇತನ ಆವರಣದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿಯ 66ನೇ ವಾರ್ಷಿಕ ಮಹಾ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಖಾಸಗಿ ಬಸ್ಗಳ ಸಂಚಾರ ನಿಯಂತ್ರಿಸಿ, ಸಾರಿಗೆ ಸಂಸ್ಥೆಯ ಬಸ್ಗಳನ್ನೇ ಹೆಚ್ಚಾಗಿ ಬಳಸಲು ಅವಕಾಶ ನೀಡಲಾಗುವುದು. ಸಾರಿಗೆ ಸಂಸ್ಥೆಯ ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು. </p>.<p>‘ನಾನು ಮುಖ್ಯಮಂತ್ರಿಯಾಗಿದ್ದಾಗ ಐದು ವರ್ಷ ಸಾರಿಗೆ ಸಂಸ್ಥೆ ಬಸ್ಗಳ ತೆರಿಗೆ ವಿನಾಯ್ತಿಗೆ ಕ್ರಮ ವಹಿಸಿದ್ದೆ. ಇದರಿಂದ ಸಂಸ್ಥೆಗೆ ವರ್ಷಕ್ಕೆ ಸುಮಾರು ₹8 ಕೋಟಿ ಲಾಭವಾಗಿತ್ತು. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೂ ಈ ಕುರಿತು ಮನವಿ ಮಾಡಲಾಗಿದೆ’ ಎಂದರು.</p>.<p>‘ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ವೇತನ ಸೇರಿದಂತೆ, ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ರಾಜ್ಯದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಿದಾಗ, ಗುತ್ತಿಗೆ ಪದ್ಧತಿ ನಿವಾರಣೆಯಾಗಲಿದೆ’ ಎಂದು ಹೇಳಿದರು.</p>.<p> ಮಹಾಮಂಡಳಿಯ ಉಪಾಧ್ಯಕ್ಷ ಈರಣ್ಣ ಮದವಾಲ, ಪ್ರಧಾನ ಕಾರ್ಯದರ್ಶಿ ಬಿ. ಜಯದೇವರಾಜೇ ಅರಸು, ಖಜಾಂಚಿ ಎನ್.ಆರ್. ದೇವರಾಜೇ ಅರಸು, ಜಿ. ಪ್ರಕಾಶಮೂರ್ತಿ, ಎ.ಎಸ್. ಒಂಟಿ, ಎನ್. ನಾರಾಯಣಸ್ವಾಮಿ, ಎಚ್.ಎಫ್. ಕವಳಿಕಾಯಿ, ಸುಲೋಚನಾ, ಮಂಜುಳಾ ನಾಯಕ, ರವೀಂದ್ರ ಶಿರೋಳಕರ, ಎಚ್.ಎಸ್. ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಸಾರಿಗೆ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಶ್ರೀರಾಮಲು ಅವರ ಗಮನಕ್ಕೆ ತಂದು, ಪರಿಷ್ಕರಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು’ ಎಂದು ಶಾಸಕ ಜಗದೀಶ ಶೆಟ್ಟರ್ ಭರವಸೆ ನೀಡಿದರು.</p>.<p>ನಗರದ ಗೋಕುಲ ರಸ್ತೆಯ ವಿಶ್ವಶ್ರಮ ಚೇತನ ಆವರಣದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿಯ 66ನೇ ವಾರ್ಷಿಕ ಮಹಾ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಖಾಸಗಿ ಬಸ್ಗಳ ಸಂಚಾರ ನಿಯಂತ್ರಿಸಿ, ಸಾರಿಗೆ ಸಂಸ್ಥೆಯ ಬಸ್ಗಳನ್ನೇ ಹೆಚ್ಚಾಗಿ ಬಳಸಲು ಅವಕಾಶ ನೀಡಲಾಗುವುದು. ಸಾರಿಗೆ ಸಂಸ್ಥೆಯ ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು. </p>.<p>‘ನಾನು ಮುಖ್ಯಮಂತ್ರಿಯಾಗಿದ್ದಾಗ ಐದು ವರ್ಷ ಸಾರಿಗೆ ಸಂಸ್ಥೆ ಬಸ್ಗಳ ತೆರಿಗೆ ವಿನಾಯ್ತಿಗೆ ಕ್ರಮ ವಹಿಸಿದ್ದೆ. ಇದರಿಂದ ಸಂಸ್ಥೆಗೆ ವರ್ಷಕ್ಕೆ ಸುಮಾರು ₹8 ಕೋಟಿ ಲಾಭವಾಗಿತ್ತು. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೂ ಈ ಕುರಿತು ಮನವಿ ಮಾಡಲಾಗಿದೆ’ ಎಂದರು.</p>.<p>‘ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ವೇತನ ಸೇರಿದಂತೆ, ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ರಾಜ್ಯದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಿದಾಗ, ಗುತ್ತಿಗೆ ಪದ್ಧತಿ ನಿವಾರಣೆಯಾಗಲಿದೆ’ ಎಂದು ಹೇಳಿದರು.</p>.<p> ಮಹಾಮಂಡಳಿಯ ಉಪಾಧ್ಯಕ್ಷ ಈರಣ್ಣ ಮದವಾಲ, ಪ್ರಧಾನ ಕಾರ್ಯದರ್ಶಿ ಬಿ. ಜಯದೇವರಾಜೇ ಅರಸು, ಖಜಾಂಚಿ ಎನ್.ಆರ್. ದೇವರಾಜೇ ಅರಸು, ಜಿ. ಪ್ರಕಾಶಮೂರ್ತಿ, ಎ.ಎಸ್. ಒಂಟಿ, ಎನ್. ನಾರಾಯಣಸ್ವಾಮಿ, ಎಚ್.ಎಫ್. ಕವಳಿಕಾಯಿ, ಸುಲೋಚನಾ, ಮಂಜುಳಾ ನಾಯಕ, ರವೀಂದ್ರ ಶಿರೋಳಕರ, ಎಚ್.ಎಸ್. ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>