ಕೋವಿಡ್ ಸೋಂಕಿತರು ಮತ್ತು ಶಂಕಿತರಿಗೆ ಚಿಕಿತ್ಸೆ ಮತ್ತು ಔಷಧ ನೀಡಲು ದಿನವಿಡೀ ಈ ಎಂಟೂ ಕೇಂದ್ರಗಳು ತೆರೆದಿರಲಿವೆ. ಜಿಲ್ಲಾ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್, ರೈಲ್ವೆ ಆಸ್ಪತ್ರೆ, ಚಿಟಗುಪ್ಪಿ ಹಾಗೂ ಇಎಸ್ಐ ಆಸ್ಪತ್ರೆ ಮತ್ತು ಹುಬ್ಬಳ್ಳಿಯ ಅಂಜುಮನ್ ವಿದ್ಯಾರ್ಥಿನಿಲಯ, ಸಂಗೊಳ್ಳಿ ರಾಯಣ್ಣ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಹಾಗೂ ಅಂಚಟಗೇರಿಯ ಮೊರಾರ್ಜಿ ದೇಸಾಯಿ ವಸತಿ ನಿಲಯಗಳಲ್ಲಿ ಹೊರರೋಗಿ ಚಿಕಿತ್ಸಾ ಕೇಂದ್ರಗಳು ಕಾರ್ಯಾರಂಭ ಮಾಡಿವೆ.