<p><strong>ಹುಬ್ಬಳ್ಳಿ:</strong> ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಬರೋಬ್ಬರಿ 9 ಕೆ.ಜಿ.ಯ ಮಾಂಸದ ಗಡ್ಡೆಯನ್ನು ನಗರದ ಕೆಎಲ್ಇ ಸುಚಿರಾಯು ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.</p>.<p>‘ಹೊಟ್ಟೆ ನೋವು ಹಾಗೂ ಉಬ್ಬುವಿಕೆಯಿಂದ ಬಳಲುತ್ತಿದ್ದ 55 ವರ್ಷದ ಮಹಿಳೆ ಆಸ್ಪತ್ರೆಗೆ ಬಂದಿದ್ದರು. ಸ್ಕ್ಯಾನಿಂಗ್ ಮಾಡಿದಾಗ ಅವರಿಗೆ ಅತ್ಯಂತ ವಿರಳವಾದ ಸೈಟಸ್ ಇನ್ವರ್ಸಸ್ ಟೂಟ್ಯಾಲಿಸ್’ ಸಮಸ್ಯೆ ಇರುವುದು ಗೊತ್ತಾಯಿತು’ ಎಂದು ಶಸ್ತ್ರಚಿಕಿತ್ಸಾ ತಜ್ಞ ಡಾ. ಜಯಪ್ರಭು ಉತ್ತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಬಳಿಕ ಅವರಿಗೆ ಸತತ ಮೂರು ತಾಸು ಶಸ್ತ್ರಚಿಕಿತ್ಸೆ ನಡೆಸಿ, 38 ಸೆಂಟಿಮೀಟರ್ ಉದ್ದ ಹಾಗೂ 26 ಸೆಂಟಿಮೀಟರ್ ಅಗಲದ 9 ಕೆ.ಜಿ ತೂಕದ ಮಾಂಸದ ಗಡ್ಡೆಯನ್ನು ಹೊರ ತೆಗೆಯಲಾಯಿತು’ ಎಂದು ಹೇಳಿದ್ದಾರೆ.</p>.<p>ಶಸ್ತ್ರಚಿಕಿತ್ಸೆ ನಡೆಸಿದ ತಂಡದಲ್ಲಿದ್ದ ಅರವಳಿಕೆ ತಜ್ಞರಾದ ಡಾ. ತೇಜಸ ಕುಲಕರ್ಣಿ, ಡಾ. ಸಾಗರ ಕೂಳ್ಳಿ ಹಾಗೂ ಸಹಾಯಕರಿಗೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ವಿಶಾಖಾ ಮಧುರಕರ ಅಭಿನಂದನೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಬರೋಬ್ಬರಿ 9 ಕೆ.ಜಿ.ಯ ಮಾಂಸದ ಗಡ್ಡೆಯನ್ನು ನಗರದ ಕೆಎಲ್ಇ ಸುಚಿರಾಯು ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.</p>.<p>‘ಹೊಟ್ಟೆ ನೋವು ಹಾಗೂ ಉಬ್ಬುವಿಕೆಯಿಂದ ಬಳಲುತ್ತಿದ್ದ 55 ವರ್ಷದ ಮಹಿಳೆ ಆಸ್ಪತ್ರೆಗೆ ಬಂದಿದ್ದರು. ಸ್ಕ್ಯಾನಿಂಗ್ ಮಾಡಿದಾಗ ಅವರಿಗೆ ಅತ್ಯಂತ ವಿರಳವಾದ ಸೈಟಸ್ ಇನ್ವರ್ಸಸ್ ಟೂಟ್ಯಾಲಿಸ್’ ಸಮಸ್ಯೆ ಇರುವುದು ಗೊತ್ತಾಯಿತು’ ಎಂದು ಶಸ್ತ್ರಚಿಕಿತ್ಸಾ ತಜ್ಞ ಡಾ. ಜಯಪ್ರಭು ಉತ್ತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಬಳಿಕ ಅವರಿಗೆ ಸತತ ಮೂರು ತಾಸು ಶಸ್ತ್ರಚಿಕಿತ್ಸೆ ನಡೆಸಿ, 38 ಸೆಂಟಿಮೀಟರ್ ಉದ್ದ ಹಾಗೂ 26 ಸೆಂಟಿಮೀಟರ್ ಅಗಲದ 9 ಕೆ.ಜಿ ತೂಕದ ಮಾಂಸದ ಗಡ್ಡೆಯನ್ನು ಹೊರ ತೆಗೆಯಲಾಯಿತು’ ಎಂದು ಹೇಳಿದ್ದಾರೆ.</p>.<p>ಶಸ್ತ್ರಚಿಕಿತ್ಸೆ ನಡೆಸಿದ ತಂಡದಲ್ಲಿದ್ದ ಅರವಳಿಕೆ ತಜ್ಞರಾದ ಡಾ. ತೇಜಸ ಕುಲಕರ್ಣಿ, ಡಾ. ಸಾಗರ ಕೂಳ್ಳಿ ಹಾಗೂ ಸಹಾಯಕರಿಗೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ವಿಶಾಖಾ ಮಧುರಕರ ಅಭಿನಂದನೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>