ಹುಬ್ಬಳ್ಳಿ:ನಗರದ ಹೊರವಲಯದ ಅಂಚಟಗೇರಿಯ ರಾಯನಾಳ ಕ್ರಾಸ್ ಬಳಿ ಕಾರು ಪಲ್ಟಿಯಾಗಿ, ಅದರಲ್ಲಿದ್ದ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡ ನಾಲ್ವರನ್ನು ಕಿಮ್ಸ್'ಗೆ ದಾಖಲಿಸಲಾಗಿದೆ.
ಮಹಾವೀರ ಗಲ್ಲಿಯ ಗಣೇಶ ಬಂಡಿ(26) ಮೃತಪಟ್ಟವರು. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದು, ಹುಬ್ಬಳ್ಳಿಯಿಂದ ಯಲ್ಲಾಪುರಕ್ಕೆ ಹೊರಟಿದ್ದರು. ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.