<p><strong>ಧಾರವಾಡ: </strong>‘ಆಧುನಿಕ ಕನ್ನಡ ಸಾಹಿತ್ಯ ಸಂದರ್ಭದ ಅಪರೂಪದ ವಿಮರ್ಶಕ ಹಾಗೂ ಚಿಂತಕ ಡಾ.ಗಿರಡ್ಡಿ ಗೋವಿಂದರಾಜ’ ಎಂದು ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಬಣ್ಣಿಸಿದರು.</p>.<p>ಇಲ್ಲಿನ ಕಲ್ಯಾಣನಗರದ ಡಾ.ಗಿರಡ್ಡಿ ಗೋವಿಂದರಾಜ ಅವರ ನಿವಾಸದ ಆವರಣದಲ್ಲಿ ಅವರ ಕುಟುಂಬ ಮತ್ತು ಡಾ.ಗಿರಡ್ಡಿ ಗೋವಿಂದರಾಜ್ ಪ್ರತಿಷ್ಠಾನ ಸಹಯೋಗದಲ್ಲಿ ಡಾ.ಗಿರಡ್ಡಿ ಗೋವಿಂದರಾಜ ಅವರ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>‘ಇಡೀ ಕರ್ನಾಟಕದ ಆಧುನಿಕ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಡಾ.ಗಿರಡ್ಡಿ, ಪ್ರಾಚೀನ ಸಾಹಿತ್ಯ ಕುರಿತು ಡಾ.ಎಂ.ಎಂ.ಕಲಬುರ್ಗಿ ಅತ್ಯಂತ ಮಹತ್ವದ ಹೆಸರುಗಳು. ಈ ಪ್ರಕಾರಗಳಲ್ಲಿ ಅವರು ಮಾಡಿದ ಕೃಷಿ ಸಾಹಿತ್ಯ ಲೋಕಕ್ಕೆ ದೊಡ್ಡ ಕೊಡುಗೆ’ ಎಂದರು.</p>.<p>‘ಭೌತಿಕವಾಗಿ ಡಾ.ಗಿರಡ್ಡಿ ನಮ್ಮೊಂದಿಗಿರದಿದ್ದರೂ ಅವರ ಪ್ರತಿಮೆ ಮೂಲಕ ಸೂಕ್ಷ್ಮ ದೇಹ ನಮ್ಮೆದುರಿಗಿದೆ. ಪ್ರತಿಮೆಯ ಮೂಲಕ ಅವರು ಮತ್ತೆ, ಮತ್ತೇ ನಮ್ಮ ಸ್ಮರಣೆಗೆ ಬರುತ್ತಾರೆ’ ಎಂದು ಹೇಳಿದರು.</p>.<p>ಡಾ.ಗಿರಡ್ಡಿ ಅವರ ಸ್ನೇಹಿತ, ಕವಿ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ ಮಾತನಾಡಿ, ‘ಮೆದು ಮಾತು, ನಿಷ್ಠುರತೆ, ಅಪ್ಪಟ ವ್ಯವಹಾರಿಕತೆ, ನಿರಂತರ ಜ್ಞಾನದ ಹುಡುಕಾಟ ಗಿರಡ್ಡಿಯವರ ವಿಶೇಷತೆಗಳಾಗಿದ್ದವು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ವೆಂಕಟೇಶ ಮಾಚಕನೂರ, ‘ಡಾ.ವೀರಣ್ಣ ರಾಜೂರ ನೇತೃತ್ವದಲ್ಲಿ ಡಾ.ಎಂ.ಎಂ. ಕಲಬುರ್ಗಿ ಅವರ ಸಮಗ್ರ ಸಾಹಿತ್ಯದ 40 ಸಂಪುಟಗಳು ಸಿದ್ಧವಾಗಿವೆ. ಅದೇ ರೀತಿ ಡಾ.ಗಿರಡ್ಡಿ ಗೋವಿಂದರಾಜರ ಸಮಗ್ರ ಸಾಹಿತ್ಯ ಸಂಪುಟ ರೂಪದಲ್ಲಿ ಹೊರ ಬರಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಷ್ಠಾನ ಯೋಜನೆ ರೂಪಿಸುತ್ತಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಡಾ.ಬಾಳಣ್ಣ ಶೀಗಿಹಳ್ಳಿ, ಸರೋಜಾ ಗಿರಡ್ಡಿ, ಡಾ.ರಮಾಕಾಂತ ಜೋಶಿ, ಡಾ.ರಾಘವೇಂದ್ರ ಪಾಟೀಲ, ಹ.ವೆಂ.ಕಾಖಂಡಕಿ, ಚಂದ್ರಕಾಂತ ಬೆಲ್ಲದ, ಡಾ.ವೀಣಾ ಶಾಂತೇಶ್ವರಿ, ಡಾ.ಹೇಮಾ ಪಟ್ಟಣಶೆಟ್ಟಿ, ಸುನೀಲ ಗಿರಡ್ಡಿ ಸೇರಿದಂತೆ ಅನೇಕ ಸಾಹಿತ್ಯಾಸಕ್ತರು, ಅಭಿಮಾನಿಗಳು, ಕುಟುಂಬದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>‘ಆಧುನಿಕ ಕನ್ನಡ ಸಾಹಿತ್ಯ ಸಂದರ್ಭದ ಅಪರೂಪದ ವಿಮರ್ಶಕ ಹಾಗೂ ಚಿಂತಕ ಡಾ.ಗಿರಡ್ಡಿ ಗೋವಿಂದರಾಜ’ ಎಂದು ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಬಣ್ಣಿಸಿದರು.</p>.<p>ಇಲ್ಲಿನ ಕಲ್ಯಾಣನಗರದ ಡಾ.ಗಿರಡ್ಡಿ ಗೋವಿಂದರಾಜ ಅವರ ನಿವಾಸದ ಆವರಣದಲ್ಲಿ ಅವರ ಕುಟುಂಬ ಮತ್ತು ಡಾ.ಗಿರಡ್ಡಿ ಗೋವಿಂದರಾಜ್ ಪ್ರತಿಷ್ಠಾನ ಸಹಯೋಗದಲ್ಲಿ ಡಾ.ಗಿರಡ್ಡಿ ಗೋವಿಂದರಾಜ ಅವರ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>‘ಇಡೀ ಕರ್ನಾಟಕದ ಆಧುನಿಕ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಡಾ.ಗಿರಡ್ಡಿ, ಪ್ರಾಚೀನ ಸಾಹಿತ್ಯ ಕುರಿತು ಡಾ.ಎಂ.ಎಂ.ಕಲಬುರ್ಗಿ ಅತ್ಯಂತ ಮಹತ್ವದ ಹೆಸರುಗಳು. ಈ ಪ್ರಕಾರಗಳಲ್ಲಿ ಅವರು ಮಾಡಿದ ಕೃಷಿ ಸಾಹಿತ್ಯ ಲೋಕಕ್ಕೆ ದೊಡ್ಡ ಕೊಡುಗೆ’ ಎಂದರು.</p>.<p>‘ಭೌತಿಕವಾಗಿ ಡಾ.ಗಿರಡ್ಡಿ ನಮ್ಮೊಂದಿಗಿರದಿದ್ದರೂ ಅವರ ಪ್ರತಿಮೆ ಮೂಲಕ ಸೂಕ್ಷ್ಮ ದೇಹ ನಮ್ಮೆದುರಿಗಿದೆ. ಪ್ರತಿಮೆಯ ಮೂಲಕ ಅವರು ಮತ್ತೆ, ಮತ್ತೇ ನಮ್ಮ ಸ್ಮರಣೆಗೆ ಬರುತ್ತಾರೆ’ ಎಂದು ಹೇಳಿದರು.</p>.<p>ಡಾ.ಗಿರಡ್ಡಿ ಅವರ ಸ್ನೇಹಿತ, ಕವಿ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ ಮಾತನಾಡಿ, ‘ಮೆದು ಮಾತು, ನಿಷ್ಠುರತೆ, ಅಪ್ಪಟ ವ್ಯವಹಾರಿಕತೆ, ನಿರಂತರ ಜ್ಞಾನದ ಹುಡುಕಾಟ ಗಿರಡ್ಡಿಯವರ ವಿಶೇಷತೆಗಳಾಗಿದ್ದವು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ವೆಂಕಟೇಶ ಮಾಚಕನೂರ, ‘ಡಾ.ವೀರಣ್ಣ ರಾಜೂರ ನೇತೃತ್ವದಲ್ಲಿ ಡಾ.ಎಂ.ಎಂ. ಕಲಬುರ್ಗಿ ಅವರ ಸಮಗ್ರ ಸಾಹಿತ್ಯದ 40 ಸಂಪುಟಗಳು ಸಿದ್ಧವಾಗಿವೆ. ಅದೇ ರೀತಿ ಡಾ.ಗಿರಡ್ಡಿ ಗೋವಿಂದರಾಜರ ಸಮಗ್ರ ಸಾಹಿತ್ಯ ಸಂಪುಟ ರೂಪದಲ್ಲಿ ಹೊರ ಬರಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಷ್ಠಾನ ಯೋಜನೆ ರೂಪಿಸುತ್ತಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಡಾ.ಬಾಳಣ್ಣ ಶೀಗಿಹಳ್ಳಿ, ಸರೋಜಾ ಗಿರಡ್ಡಿ, ಡಾ.ರಮಾಕಾಂತ ಜೋಶಿ, ಡಾ.ರಾಘವೇಂದ್ರ ಪಾಟೀಲ, ಹ.ವೆಂ.ಕಾಖಂಡಕಿ, ಚಂದ್ರಕಾಂತ ಬೆಲ್ಲದ, ಡಾ.ವೀಣಾ ಶಾಂತೇಶ್ವರಿ, ಡಾ.ಹೇಮಾ ಪಟ್ಟಣಶೆಟ್ಟಿ, ಸುನೀಲ ಗಿರಡ್ಡಿ ಸೇರಿದಂತೆ ಅನೇಕ ಸಾಹಿತ್ಯಾಸಕ್ತರು, ಅಭಿಮಾನಿಗಳು, ಕುಟುಂಬದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>