ಹುಬ್ಬಳ್ಳಿ: ‘ಮಹಾನಗರ ಪಾಲಿಕೆ ಹಾಗೂ ಜಲಮಂಡಳಿ ಗುತ್ತಿಗೆ ನೌಕರರ ನಡುವಿನ ಸಂಘರ್ಷದಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಶೀಘ್ರ ಪರಿಹರಿಸಲು ಕ್ರಮ ವಹಿಸಬೇಕು’ ಎಂದು ಆಮ್ ಆದ್ಮಿ ಪಕ್ಷದ ಧಾರವಾಡ ಜಿಲ್ಲಾ ಘಟಕದ ಉಪಾಧ್ಯಕ್ಷ ವಿಕಾಸ ಸೊಪ್ಪಿನ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಾಲಿಕೆಯ ಜನವಿರೋಧಿ ಧೋರಣೆಯಿಂದಾಗಿ ಜನ ನೀರಿಗಾಗಿ ಪರದಾಡುವಂತಾಗಿದೆ. ಬಿಸಿಲಿನ ತಾಪ, ರಂಜಾನ್ ಕಾರಣ ನೀರಿನ ಅಗತ್ಯತೆ ಹೆಚ್ಚಿದ್ದರೂ, ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ’ ಎಂದರು.