ರಾಷ್ಟ್ರೀಯ ಕಾರ್ಯದರ್ಶಿ ಹರ್ಷ ನಾರಾಯಣ್ ಮಾತನಾಡಿ, ‘ಬದಲಾದ ಕಾಲಕ್ಕೆ ತಕ್ಕಂತೆ, ರಚನಾತ್ಮಕವಾಗಿ ಸಂಘಟನೆಯನ್ನು ಮುಂದಕ್ಕೆ ಕೊಂಡೊಯ್ಯಬೇಕಿದೆ.ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಶೈಕ್ಷಣಿಕ ಚಟುವಟಿಕೆಗಳಿಗೆ ಪರಿಷತ್ ಬೆಂಬಲ ಸೂಚಿಸಿ, ಯಶಸ್ಸಿಗೆ ಶ್ರಮಿಸಿದೆ. ವೈದ್ಯಕೀಯ ಶಿಕ್ಷಣದ ಶುಲ್ಕ ಹೆಚ್ಚಳದ ವಿರುದ್ಧ ದನಿ ಎತ್ತಿದೆ. ಡ್ರಗ್ಸ್ ದಂಧೆ ಕಡಿವಾಣಕ್ಕೆ ಸರ್ಕಾರವನ್ನು ಒತ್ತಾಯಿಸುವ ಜತೆಗೆ, ಜಾಗೃತಿ ಕಾರ್ಯಕ್ರಮಗಳನ್ನು ಮಾಡಿಕೊಳ್ಳುತ್ತಾ ಬಂದಿದೆ’ ಎಂದರು.