ಆಟೊ ಚಾಲಕ ದಾದಾ ಹಯಾತ್ ಮತ್ತಿಗಟ್ಟಿ (35) ಸ್ಥಳದಲ್ಲೇ ಸಾವಿಗೀಡಾದರೆ, ಅದರಲ್ಲಿ ಪ್ರಯಾಣಿಸುತ್ತಿದ್ದ ಬಾಗಲಕೋಟೆಯ ನಿವಾಸಿ ಯಲ್ಲವ್ವ ಪ್ರಭುಕರ್ (65) ಅವರು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಕೊನೆಯುಸಿರೆಳೆದರು. ಯಲ್ಲವ್ವ ಅವರ ಪತಿ ವಿಠ್ಠಲ ಪ್ರಭುಕರ್ ಹಾಗೂ ಪುತ್ರ ರಾಮು ಪ್ರಭುಕರ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಕಿಮ್ಸ್ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಟೊ–ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಮರುಕ್ಷಣವೇ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರರೊಬ್ಬರು ಆಟೊಗೆ ಡಿಕ್ಕಿ ಹೊಡೆದರು. ಅವರ ಮುಖಕ್ಕೂ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿ ಶ್ರೀನಿವಾಸ್ ‘ಪ್ರಜಾವಾಣಿ’ಗೆ ತಿಳಿಸಿದರು.