ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸ್ಥಳದಲ್ಲೇ ಸಾವು

Last Updated 25 ನವೆಂಬರ್ 2020, 4:24 IST
ಅಕ್ಷರ ಗಾತ್ರ
ADVERTISEMENT
""

ಅಣ್ಣಿಗೇರಿ: ಅಣ್ಣಿಗೇರಿ ಸಮೀಪದ ಗದಗ ರಸ್ತೆಯ ದುಂದೂರ ಕ್ರಾಸ ಬಳಿ ಬುಧವಾರ ಬೆಳಗಿನ ಜಾವ ಕಾರು ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಒಂದೇ ಕುಟುಂಬದ ಸಣ್ಣ ಗಂಗಣ್ಣ(52), ನಾಗಮ್ಮ(48), ಈರಣ್ಣ(24) ಹಾಗೂ ಹನಮಂತ (37)ಎಂದು ತಿಳಿದು ಬಂದಿದೆ.

ಗಾಯಗೊಂಡ ಸಣ್ಣಈರಣ್ಣ(50) ಮತ್ತು ಲಕ್ಷ್ಮಿ (20)ಎಂಬುವರನ್ನು ಹೆಚ್ಚಿನ ಚಿಕಿತ್ಸೆಗೆ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರಾಗಿದ್ದಾರೆ. ಪಾರ್ಶ್ವವಾಯು ಚಿಕಿತ್ಸೆಗಾಗಿ ಕಾರವಾರ ತಾಲ್ಲೂಕಿನ ಹಳಗಾ ಗ್ರಾಮಕ್ಕೆ ಹೊರಟಿದ್ದರು.

ಅಪಘಾತಕ್ಕೀಡಾಗಿರುವ ಕ್ರೂಸರ್

ಹುಬ್ಬಳ್ಳಿಯಿಂದ ಬಳ್ಳಾರಿಗೆ ದಿನಪತ್ರಿಕೆ ವಿತರಣೆಗೆ ಹೊರಟಿತ್ತು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಿಪಿಐ ಚಂದ್ರಶೇಖರ ಮಠಪತಿ, ಪಿಎಸ್ಐ ಲಾಲಸಾಬ ಜೂಲಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT