ಸರ್ಫರಾಜ್ ಎರಡು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಮೊದಲು ಒಂದು ಖಾಸಗಿ ಆಸ್ಪತ್ರೆಗೆ ಹೋದಾಗ ಕೊರೊನಾ ಸೋಂಕಿನ ಶಂಕೆಯಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲು ಅವಕಾಶ ಕೊಡುವುದಿಲ್ಲ ಎಂದು ಹೇಳಿದರು. ಇನ್ನೊಂದು ಆಸ್ಪತ್ರೆಯ ವೈದ್ಯರಿಗೆ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ಚಿಕಿತ್ಸೆ ಕೊಡಲು ಅವರು ಒಪ್ಪಲಿಲ್ಲ ಎಂದು ಸರ್ಫರಾಜ್ ಅವರ ಸಂಬಂಧಿ ಇಮ್ರಾನ್ಖಾನ್ ಮುಲ್ಲಾ ‘ಪ್ರಜಾವಾಣಿ’ಗೆ ತಿಳಿಸಿದರು.