<p>ಧಾರವಾಡ: ‘ಕಾಳಸಂತೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಲ್ಪಿಜಿ ವಿತರಕರು, ಹೋಟೆಲ್ ಮಾಲೀಕರು ಮತ್ತು ಅನಿಲ ಏಜೆನ್ಸಿಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗೃಹಬಳಕೆಯ ಸಿಲಿಂಡರ್ ಅನ್ನು ಒಮ್ಮೆ ಬುಕ್ ಮಾಡಿದ ನಂತರ ಮತ್ತೊಮ್ಮೆ ಬುಕ್ ಮಾಡಲು ನಗರ ಪ್ರದೇಶದ ಗ್ರಾಹಕರಿಗೆ 25 ದಿನ ಮತ್ತು ಗ್ರಾಮೀಣ ಭಾಗದ ಗ್ರಾಹಕರಿಗೆ 45 ದಿನ ನಿಗದಿಪಡಿಸಲಾಗಿದೆ. ವದಂತಿಗಳಿಗೆ ಕಿವಿಗೊಡಬಾರದು. ಅವಸರಪಡದೆ ಸಹಕಾರ ನೀಡಬೇಕು’ ಎಂದರು. </p>.<p>‘ಸರ್ಕಾರದ ನಿರ್ದೇಶನದಂತೆ ಗ್ರಾಹಕರಿಗೆ ಸಿಲಿಂಡರ್ ವಿತರಿಸಲಾಗುತ್ತಿದೆ. ಸಿಲಿಂಡರ್ಗಳ ವಿತರಣೆಯಲ್ಲಿ ವೈದ್ಯಕೀಯ, ಶಾಲಾ–ಕಾಲೇಜು, ಅಂಗನವಾಡಿ, ವಿದ್ಯಾರ್ಥಿನಿಲಯ, ಇಂದಿರಾ ಕ್ಯಾಂಟೀನ್ಗಳಿಗೆ ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳ ಕೊರತೆ ಇಲ್ಲ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಿಲಿಂಡರ್ ಬುಕ್ ಮಾಡಿದ ನಂತರ ಕನಿಷ್ಠ ಅವಧಿವರೆಗೆ ಕಾಯಬೇಕು’ ಎಂದರು.</p>.<p>ಧಾರವಾಡ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಮಹೇಶ ಶೆಟ್ಟಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಐಒಸಿ, ಬಿಪಿಸಿ, ಎಚ್ಪಿಸಿ ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಕಾಳಸಂತೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಲ್ಪಿಜಿ ವಿತರಕರು, ಹೋಟೆಲ್ ಮಾಲೀಕರು ಮತ್ತು ಅನಿಲ ಏಜೆನ್ಸಿಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗೃಹಬಳಕೆಯ ಸಿಲಿಂಡರ್ ಅನ್ನು ಒಮ್ಮೆ ಬುಕ್ ಮಾಡಿದ ನಂತರ ಮತ್ತೊಮ್ಮೆ ಬುಕ್ ಮಾಡಲು ನಗರ ಪ್ರದೇಶದ ಗ್ರಾಹಕರಿಗೆ 25 ದಿನ ಮತ್ತು ಗ್ರಾಮೀಣ ಭಾಗದ ಗ್ರಾಹಕರಿಗೆ 45 ದಿನ ನಿಗದಿಪಡಿಸಲಾಗಿದೆ. ವದಂತಿಗಳಿಗೆ ಕಿವಿಗೊಡಬಾರದು. ಅವಸರಪಡದೆ ಸಹಕಾರ ನೀಡಬೇಕು’ ಎಂದರು. </p>.<p>‘ಸರ್ಕಾರದ ನಿರ್ದೇಶನದಂತೆ ಗ್ರಾಹಕರಿಗೆ ಸಿಲಿಂಡರ್ ವಿತರಿಸಲಾಗುತ್ತಿದೆ. ಸಿಲಿಂಡರ್ಗಳ ವಿತರಣೆಯಲ್ಲಿ ವೈದ್ಯಕೀಯ, ಶಾಲಾ–ಕಾಲೇಜು, ಅಂಗನವಾಡಿ, ವಿದ್ಯಾರ್ಥಿನಿಲಯ, ಇಂದಿರಾ ಕ್ಯಾಂಟೀನ್ಗಳಿಗೆ ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳ ಕೊರತೆ ಇಲ್ಲ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಿಲಿಂಡರ್ ಬುಕ್ ಮಾಡಿದ ನಂತರ ಕನಿಷ್ಠ ಅವಧಿವರೆಗೆ ಕಾಯಬೇಕು’ ಎಂದರು.</p>.<p>ಧಾರವಾಡ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಮಹೇಶ ಶೆಟ್ಟಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಐಒಸಿ, ಬಿಪಿಸಿ, ಎಚ್ಪಿಸಿ ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>