‘ಸಾಂವಿಧಾನಿಕವಾಗಿ ಪಕ್ಷಾತೀತ, ಧರ್ಮಾತೀತವಾದ ಹುದ್ದೆಗೆ ಧರ್ಮದ ನಂಟು ಬೆಸೆಯುವ ಮೂಲಕ ಈ ಹುದ್ದೆಯ ಹೆಸರಿನಲ್ಲಿ ರಾಜಕೀಯ ಲಾಭಕ್ಕಾಗಿ ಸಚಿವರು ಯತ್ನಿಸಿದ್ದಾರೆ. ಇದನ್ನು ವಿಧಾನಸಭಾಧ್ಯಕ್ಷರು ಗಂಭೀರವಾಗಿ ಪರಿಗಣಿಸಿ ಸಚಿವರ ವಿರುದ್ಧ ಶಿಸ್ತುಕ್ರಮಕ್ಕೆ ಮುಂದಾಗಬೇಕು. ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.