ಇಲ್ಲಿನ ಆನಂದನಗರದಲ್ಲಿ ಶನಿವಾರ ಅಂಧಮಕ್ಕಳ ಸರ್ಕಾರಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ‘ನಾನು ಅಧಿಕಾರ ಸ್ವೀಕರಿಸಿದ ಬಳಿಕ 52 ಸಿಡಿಪಿಒ ಹಾಗೂ 265 ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದೇನೆ. ಅಧಿಕಾರಿಗಳಿಗೆ ಬಡ್ತಿ, ನೌಕರರ ಬಾಕಿ ವೇತನ ಹಾಗೂ ನಿವೃತ್ತರ ಪಿಂಚಣಿ ಸಮಸ್ಯೆ ನಿವಾರಿಸಲು ಆದ್ಯತೆ ನೀಡುವೆ. ಇಲಾಖೆಯಲ್ಲಿ ಕಡಿಮೆ ಗೌರವಧನಕ್ಕೆ ಹಲವರು ಕೆಲಸ ಮಾಡುತ್ತಿದ್ದಾರೆ. ಅವರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು.