<p><strong>ಧಾರವಾಡ:</strong> ‘ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾಧ್ಯಮ ಕಾರ್ಯಾಗಾರ ಆಯೋಜಿಸಿ ಸರ್ಕಾರಿ ನೌಕರರಿಗೆ ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳಿವಳಿಕೆ ಮೂಡಿಸಲಾಗುವುದು’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅಧಿಕೃತ ಪತ್ರಕರ್ತರಿಗೆ ವೃತ್ತಿ ದೃಷ್ಠಿಯಿಂದ ಸಿಗಬೇಕಾದ ಮಾಹಿತಿ ನೀಡಲು ಅಧಿಕಾರಿಗಳು, ಸಿಬ್ಬಂದಿಗೆ ಮಾಧ್ಯಮದ ಕಾರ್ಯ ಚಟುವಟಿಕೆಗಳ ಕುರಿತು ಮತ್ತು ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳಿಸುವುದು, ನಕಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವುದು ಕಾರ್ಯಾಗಾರದ ಉದ್ದೇಶವಾಗಿದೆ’ ಎಂದರು. </p>.<p>‘ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಮಾಧ್ಯಮ ಕ್ಷೇತ್ರವನ್ನು ಕರೆಯಲಾಗುತ್ತದೆ. ಸಾರ್ವಜನಿಕರಿಗೆ ವಿದ್ಯಮಾನಗಳು, ಮಾಹಿತಿಗಳನ್ನು ತಿಳಿಸಲು ಮಾಧ್ಯಮ ಅವಶ್ಯಕ. ಸಾರ್ವಜನಿಕರಿಗೆ ಸ್ಫಂದಿಸುವುದು ಮಾಧ್ಯಮ ಮತ್ತು ಜಿಲ್ಲಾಡಳಿತದ ಕರ್ತವ್ಯ’ ಎಂದು ತಿಳಿಸಿದರು. </p>.<p>ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಮಾತನಾಡಿ, ಸರ್ಕಾರದ ಯೋಜನೆ, ಬಜೆಟ್ ಸಹಿತ ಸಂಗತಿಗಳನ್ನು ಜನರಿಗೆ ತಿಳಿಸುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ದೇಶದ ಪ್ರಜಾಪ್ರಭುತ್ವದಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಘನತೆ ಇದೆ’ ಎಂದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರ, ವಿವಿಧ ಮಾಧ್ಯಮ ಸಂಸ್ಥೆಗಳ ಬ್ಯೂರೊ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು. </p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಬಂಡು ಕುಲಕರ್ಣಿ, ಪ್ರಕರ್ತರಾದ ಮೋಹನ ಹೆಗಡೆ, ಮಲ್ಲಿಕಾರ್ಜುನ ಸಿದ್ದಣ್ಣನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ವಾರ್ತಾ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಸುರೇಶ ಹಿರೇಮಠ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾಧ್ಯಮ ಕಾರ್ಯಾಗಾರ ಆಯೋಜಿಸಿ ಸರ್ಕಾರಿ ನೌಕರರಿಗೆ ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳಿವಳಿಕೆ ಮೂಡಿಸಲಾಗುವುದು’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅಧಿಕೃತ ಪತ್ರಕರ್ತರಿಗೆ ವೃತ್ತಿ ದೃಷ್ಠಿಯಿಂದ ಸಿಗಬೇಕಾದ ಮಾಹಿತಿ ನೀಡಲು ಅಧಿಕಾರಿಗಳು, ಸಿಬ್ಬಂದಿಗೆ ಮಾಧ್ಯಮದ ಕಾರ್ಯ ಚಟುವಟಿಕೆಗಳ ಕುರಿತು ಮತ್ತು ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳಿಸುವುದು, ನಕಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವುದು ಕಾರ್ಯಾಗಾರದ ಉದ್ದೇಶವಾಗಿದೆ’ ಎಂದರು. </p>.<p>‘ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಮಾಧ್ಯಮ ಕ್ಷೇತ್ರವನ್ನು ಕರೆಯಲಾಗುತ್ತದೆ. ಸಾರ್ವಜನಿಕರಿಗೆ ವಿದ್ಯಮಾನಗಳು, ಮಾಹಿತಿಗಳನ್ನು ತಿಳಿಸಲು ಮಾಧ್ಯಮ ಅವಶ್ಯಕ. ಸಾರ್ವಜನಿಕರಿಗೆ ಸ್ಫಂದಿಸುವುದು ಮಾಧ್ಯಮ ಮತ್ತು ಜಿಲ್ಲಾಡಳಿತದ ಕರ್ತವ್ಯ’ ಎಂದು ತಿಳಿಸಿದರು. </p>.<p>ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಮಾತನಾಡಿ, ಸರ್ಕಾರದ ಯೋಜನೆ, ಬಜೆಟ್ ಸಹಿತ ಸಂಗತಿಗಳನ್ನು ಜನರಿಗೆ ತಿಳಿಸುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ದೇಶದ ಪ್ರಜಾಪ್ರಭುತ್ವದಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಘನತೆ ಇದೆ’ ಎಂದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರ, ವಿವಿಧ ಮಾಧ್ಯಮ ಸಂಸ್ಥೆಗಳ ಬ್ಯೂರೊ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು. </p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಬಂಡು ಕುಲಕರ್ಣಿ, ಪ್ರಕರ್ತರಾದ ಮೋಹನ ಹೆಗಡೆ, ಮಲ್ಲಿಕಾರ್ಜುನ ಸಿದ್ದಣ್ಣನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ವಾರ್ತಾ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಸುರೇಶ ಹಿರೇಮಠ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>