'ಗಣೇಶೋತ್ಸವ ಅಂಗವಾಗಿ ರಾಜ್ಯದಾದ್ಯಂತ ಪಥ ಸಂಚಲನ ನಡೆಸಲಾಗಿದೆ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ದೊಡ್ಡ ಮಟ್ಟದಲ್ಲಿ ಉತ್ಸವ ನಡೆಯುತ್ತವೆ. ಇಲ್ಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಒಂದುವಾರದಿಂದ ಪಥಸಂಚಲನ ನಡೆಯುತ್ತಿವೆ. ಅಲ್ಲದೆ, ಡ್ರೋಣ್ ಕ್ಯಾಮೆರಾಗಳನ್ನು ಬಳಸಿ ಹದ್ದಿನ ಕಣ್ಣಿಡಲಾಗುತ್ತಿದೆ. ರೌಡಿಗಳಿಂದ ಮುಚ್ಚಳಿಕೆ ಪತ್ರವನ್ನು ಸಹ ಬರೆಸಿಕೊಳ್ಳಲಾಗುತ್ತಿದೆ' ಎಂದರು.