ಹುಬ್ಬಳ್ಳಿ: ಗಣೇಶ ಚತುರ್ಥಿ ಅಂಗವಾಗಿ ಹುಧಾ ಪೊಲೀಸ್ ಕಮಿಷನರೇಟ್ ಘಟಕದ ಸಿಬ್ಬಂದಿ ಸೋಮವಾರ ನಗರದ ವಿವಿಧೆಡೆ ಪಥಸಂಚಲನ ನಡೆಸಿದರು.
ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ನಡೆದ ಪಥಸಂಚಲನ ಚನ್ನಮ್ಮ ವೃತ್ತದಿಂದ ಆರಂಭವಾಗಿ, ಈದ್ಗಾ ಮೈದಾನ, ಲ್ಯಾಮಿಂಗ್ಟನ್ ರಸ್ತೆ, ಕೊಪ್ಪಿಕರ್ ರಸ್ತೆ, ದುರ್ಗದ ಬೈಲ್, ಸಿಬಿಟಿ, ಗಣೇಶಪೇಟೆ ಮುಖಾಂತರ ಸಾಗಿತು.
ಕ್ಷಿಪ್ರ ಕಾರ್ಯಾಚರಣೆ ಪಡೆ, ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ಇದ್ದರು. ಕಮಿಷನರ್ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲ ಬ್ಯಾಕೋಡ್ ಹಾಗೂ ಎಸಿಪಿ, ಇನ್ಸ್ಪೆಕ್ಟರ್ಗಳು ಪಾಲ್ಗೊಂಡಿದ್ದರು.