ನವನಗರದ ಕರ್ನಾಟಕ ವೃತ್ತದಲ್ಲಿ ರೌಡಿ ಶೀಟರ್ ಪ್ರವೀಣ್ ಪೂಜಾರಿ, ಮಲ್ಲಯ್ಯ ಹಿರೇಮಠ ಮತ್ತು ವಕೀಲ ವಿನೋದ ಪಾಟೀಲ ಎಂಬುವರು ಜಗಳವಾಡುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ್ದ ಪೊಲೀಸರ ವಿರುದ್ಧ ಎಲ್ಲರೂ ತಿರುಗಿ ಬಿದ್ದಿದ್ದರು ಎಂದು ಸೂರಿನ್ ಪ್ರಕರಣ ದಾಖಲಿಸಿಕೊಂಡಿದ್ದರು. ಪಾಟೀಲ ಅವರ ವಿರುದ್ಧ ಸೂರಿನ್ ದರ್ಪ ತೋರಿಸಿ, ಕಾನೂನುಬಾಹಿರವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ವಕೀಲರು ಪ್ರತಿಭಟನೆ ನಡೆಸಿದ್ದರು.