<p><strong>ಹುಬ್ಬಳ್ಳಿ</strong>: ‘ರಾಜ್ಯ ಸರ್ಕಾರವು ದೇವನಹಳ್ಳಿ ತಾಲ್ಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಏರೋಸ್ಪೇಸ್ ಪಾರ್ಕ್ಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಟ್ಟಿದ್ದು, ಉದ್ದೇಶಿತ ಈ ಯೋಜನೆಯನ್ನು ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ–ಧಾರವಾಡದಲ್ಲಿ ಸ್ಥಾಪಿಸಬೇಕು’ ಎಂದು ರಾಜ್ಯ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ನರೇಂದ್ರ ಕುಲಕರ್ಣಿ ಆಗ್ರಹಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏರೋಸ್ಪೇಸ್ ಪಾರ್ಕ್ ಸ್ಥಾಪನೆಯಿಂದ ಸಾವಿರಾರು ಜನರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ದೊರೆಯಲಿದೆ. ಎಂಜಿನಿಯರಿಂಗ್, ತಾಂತ್ರಿಕ ಕ್ಷೇತ್ರದಲ್ಲಿಯೂ ಅವಕಾಶಗಳು ತೆರೆದುಕೊಳ್ಳಲಿವೆ’ ಎಂದರು.</p>.<p>‘ಏರೋಸ್ಪೇಸ್ ಪಾರ್ಕ್ ಸ್ಥಾಪನೆಯಿಂದಾಗಿ ಸುತ್ತಲಿನ ಪ್ರದೇಶದಲ್ಲಿ ವಸತಿ, ಮಾಲ್, ಹೋಟೆಲ್, ಗೋದಾಮು, ಸಾರಿಗೆ ವ್ಯವಸ್ಥೆ ಅಭಿವೃದ್ಧಿ ಆಗುವುದರ ಜತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕಗೆಳಿಗೂ ಸಾಕಷ್ಟು ಅವಕಾಶ ದೊರಕುತ್ತವೆ. ಅಂತರರಾಷ್ಟ್ರೀಯ ಕಂಪನಿಗಳು ಸಹ ಹೂಡಿಕೆಗೆ ಆಸಕ್ತಿ ತೋರಲಿವೆ’ ಎಂದು ಹೇಳಿದರು.</p>.<p>‘ಮಹತ್ತರವಾದ ಕೈಗಾರಿಕಾ ಅವಕಾಶಗಳನ್ನು ಪಕ್ಕದ ರಾಜ್ಯಗಳು ತಮ್ಮ ರಾಜ್ಯಗಳತ್ತ ಸೆಳೆಯಲು ಕಸರತ್ತು ಆರಂಭಿಸಿವೆ. ಈ ಯೋಜನೆ ಬೇರೆ ರಾಜ್ಯಗಳಿಗೆ ಸ್ಥಳಾಂತರವಾಗಲು ಬಿಡದೆ ಹುಬ್ಬಳ್ಳಿ–ಧಾರವಾಡದಲ್ಲಿ ಸ್ಥಾಪನೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಪಕ್ಕದ ಬೆಳಗಾವಿಯಲ್ಲಿ ಭಾರತೀಯ ಭೂಸೇನೆ ಹಾಗೂ ವಾಯುಸೇನೆಯ ಪ್ರಮುಖ ಕೇಂದ್ರಗಳು ಇರುವುದರಿಂದ ಏರೋಸ್ಪೇಸ್ ಪಾರ್ಕ್ ನಿರ್ಮಾಣವಾದರೆ ಸಾಕಷ್ಟು ಬಿಡಿ ಭಾಗಗಳ ಉತ್ಪಾನಾ ಕೈಗಾರಿಕೆಗಳಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ’ ಎಂದರು.</p>.<p>‘ಉತ್ತರ ಕರ್ನಾಟಕ ಭಾಗದ ಪ್ರಾದೇಶಿಕ ಸಮತೋಲನ, ಉದ್ಯೋಗಾವಕಾಶ, ಶಿಕ್ಷಣ ಮಟ್ಟದ ಏರಿಕೆಗೂ ಇದರಿಂದ ಸಹಾಯವಾಗಲಿದೆ. ಬೆಲೂರು ಕೈಗಾರಿಕಾ ಪ್ರದೇಶದಲ್ಲಿ ಈ ಯೋಜನೆ ಸ್ಥಾಪನೆ ಮಾಡಲು ಅನುಕೂಲಕರ ವಾತಾವರಣವಿದೆ. ಈ ಹಿನ್ನೆಲೆಯಲ್ಲಿ ಭಾಗದ ಎಲ್ಲ ಶಾಸಕರು ಪಕ್ಷಾತೀತವಾಗಿ ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ರಾಜ್ಯ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಶ್ರೀಮಂತ ಧನಗಾರ, ಚಂದ್ರಕಾಂತ ಗಡಕರಿ, ಉದ್ಯಮಿಗಳಾದ ಮೃತ್ಯುಂಜಯ ಮರೋಳ, ಮಹಾಂತೇಶ ಬತ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ರಾಜ್ಯ ಸರ್ಕಾರವು ದೇವನಹಳ್ಳಿ ತಾಲ್ಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಏರೋಸ್ಪೇಸ್ ಪಾರ್ಕ್ಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಟ್ಟಿದ್ದು, ಉದ್ದೇಶಿತ ಈ ಯೋಜನೆಯನ್ನು ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ–ಧಾರವಾಡದಲ್ಲಿ ಸ್ಥಾಪಿಸಬೇಕು’ ಎಂದು ರಾಜ್ಯ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ನರೇಂದ್ರ ಕುಲಕರ್ಣಿ ಆಗ್ರಹಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏರೋಸ್ಪೇಸ್ ಪಾರ್ಕ್ ಸ್ಥಾಪನೆಯಿಂದ ಸಾವಿರಾರು ಜನರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ದೊರೆಯಲಿದೆ. ಎಂಜಿನಿಯರಿಂಗ್, ತಾಂತ್ರಿಕ ಕ್ಷೇತ್ರದಲ್ಲಿಯೂ ಅವಕಾಶಗಳು ತೆರೆದುಕೊಳ್ಳಲಿವೆ’ ಎಂದರು.</p>.<p>‘ಏರೋಸ್ಪೇಸ್ ಪಾರ್ಕ್ ಸ್ಥಾಪನೆಯಿಂದಾಗಿ ಸುತ್ತಲಿನ ಪ್ರದೇಶದಲ್ಲಿ ವಸತಿ, ಮಾಲ್, ಹೋಟೆಲ್, ಗೋದಾಮು, ಸಾರಿಗೆ ವ್ಯವಸ್ಥೆ ಅಭಿವೃದ್ಧಿ ಆಗುವುದರ ಜತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕಗೆಳಿಗೂ ಸಾಕಷ್ಟು ಅವಕಾಶ ದೊರಕುತ್ತವೆ. ಅಂತರರಾಷ್ಟ್ರೀಯ ಕಂಪನಿಗಳು ಸಹ ಹೂಡಿಕೆಗೆ ಆಸಕ್ತಿ ತೋರಲಿವೆ’ ಎಂದು ಹೇಳಿದರು.</p>.<p>‘ಮಹತ್ತರವಾದ ಕೈಗಾರಿಕಾ ಅವಕಾಶಗಳನ್ನು ಪಕ್ಕದ ರಾಜ್ಯಗಳು ತಮ್ಮ ರಾಜ್ಯಗಳತ್ತ ಸೆಳೆಯಲು ಕಸರತ್ತು ಆರಂಭಿಸಿವೆ. ಈ ಯೋಜನೆ ಬೇರೆ ರಾಜ್ಯಗಳಿಗೆ ಸ್ಥಳಾಂತರವಾಗಲು ಬಿಡದೆ ಹುಬ್ಬಳ್ಳಿ–ಧಾರವಾಡದಲ್ಲಿ ಸ್ಥಾಪನೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಪಕ್ಕದ ಬೆಳಗಾವಿಯಲ್ಲಿ ಭಾರತೀಯ ಭೂಸೇನೆ ಹಾಗೂ ವಾಯುಸೇನೆಯ ಪ್ರಮುಖ ಕೇಂದ್ರಗಳು ಇರುವುದರಿಂದ ಏರೋಸ್ಪೇಸ್ ಪಾರ್ಕ್ ನಿರ್ಮಾಣವಾದರೆ ಸಾಕಷ್ಟು ಬಿಡಿ ಭಾಗಗಳ ಉತ್ಪಾನಾ ಕೈಗಾರಿಕೆಗಳಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ’ ಎಂದರು.</p>.<p>‘ಉತ್ತರ ಕರ್ನಾಟಕ ಭಾಗದ ಪ್ರಾದೇಶಿಕ ಸಮತೋಲನ, ಉದ್ಯೋಗಾವಕಾಶ, ಶಿಕ್ಷಣ ಮಟ್ಟದ ಏರಿಕೆಗೂ ಇದರಿಂದ ಸಹಾಯವಾಗಲಿದೆ. ಬೆಲೂರು ಕೈಗಾರಿಕಾ ಪ್ರದೇಶದಲ್ಲಿ ಈ ಯೋಜನೆ ಸ್ಥಾಪನೆ ಮಾಡಲು ಅನುಕೂಲಕರ ವಾತಾವರಣವಿದೆ. ಈ ಹಿನ್ನೆಲೆಯಲ್ಲಿ ಭಾಗದ ಎಲ್ಲ ಶಾಸಕರು ಪಕ್ಷಾತೀತವಾಗಿ ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ರಾಜ್ಯ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಶ್ರೀಮಂತ ಧನಗಾರ, ಚಂದ್ರಕಾಂತ ಗಡಕರಿ, ಉದ್ಯಮಿಗಳಾದ ಮೃತ್ಯುಂಜಯ ಮರೋಳ, ಮಹಾಂತೇಶ ಬತ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>