ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಗ್ರಿಗೋಲ್ಡ್ ಸಂಸ್ಥೆಯು ರಾಜ್ಯದಲ್ಲಿ ಒಟ್ಟು 8.5 ಲಕ್ಷಕ್ಕೂ ಹೆಚ್ಚು ಗ್ರಾಹಕರಿಂದ ₹1,700 ಕೋಟಿಗೂ ಅಧಿಕ ಹಣ ಸಂಗ್ರಹ ಮಾಡಿ ವಂಚನೆ ಮಾಡಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ. ಸಿಐಡಿ ಸಹ ಅಗ್ರಿಗೋಲ್ಡ್ನ ಚರಾಸ್ತಿಗಳನ್ನು ವಶಕ್ಕೆ ಪಡೆದಿದೆ. ಆದರೆ, ಈವರೆಗೆ ವಂಚನೆಗೆ ಒಳಗಾದವರಿಗೆ ಪರಿಹಾರ ದೊರಕಿಲ್ಲ’ ಎಂದರು.