<p><strong>ಹುಬ್ಬಳ್ಳಿ:</strong> ‘ಅಗ್ರಿಗೋಲ್ಡ್ ಸಂಸ್ಥೆಯಿಂದ ಲಕ್ಷಾಂತರ ಠೇವಣಿದಾರರಿಗೆ ನಷ್ಟವಾಗಿದೆ. ಸಂಸ್ಥೆಯ ಆಸ್ತಿಯನ್ನು ಮುಟ್ಟಗೋಲು ಹಾಕಿಕೊಂಡು, ಠೇವಣಿದಾರರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಬೇಕು. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳಬೇಕು’ ಎಂದು ಅಗ್ರಿಗೋಲ್ಡ್ ಗ್ರಾಹಕರು ಹಾಗೂ ಏಜೆಂಟ್ ಕ್ಷೇಮಾಭಿವೃದ್ಧಿ ಸಂಘದ ಧಾರವಾಡ ಜಿಲ್ಲಾ ಘಟಕ ಅಧ್ಯಕ್ಷ ವೀರಬಸಪ್ಪ ಅಂಕಲಿ ಒತ್ತಾಯಿಸಿದರು. </p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಗ್ರಿಗೋಲ್ಡ್ ಸಂಸ್ಥೆಯು ರಾಜ್ಯದಲ್ಲಿ ಒಟ್ಟು 8.5 ಲಕ್ಷಕ್ಕೂ ಹೆಚ್ಚು ಗ್ರಾಹಕರಿಂದ ₹1,700 ಕೋಟಿಗೂ ಅಧಿಕ ಹಣ ಸಂಗ್ರಹ ಮಾಡಿ ವಂಚನೆ ಮಾಡಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ. ಸಿಐಡಿ ಸಹ ಅಗ್ರಿಗೋಲ್ಡ್ನ ಚರಾಸ್ತಿಗಳನ್ನು ವಶಕ್ಕೆ ಪಡೆದಿದೆ. ಆದರೆ, ಈವರೆಗೆ ವಂಚನೆಗೆ ಒಳಗಾದವರಿಗೆ ಪರಿಹಾರ ದೊರಕಿಲ್ಲ’ ಎಂದರು.</p>.<p>‘ಧಾರವಾಡದಲ್ಲಿ ಮೂರು ಸಾವಿರ ಏಜೆಂಟರು ಹಾಗೂ 35 ಸಾವಿರ ಜನ ಗ್ರಾಹಕರಿದ್ದೇವೆ. ಸಂಸ್ಥೆಯಿಂದ ವಶಪಡಿಸಿಕೊಂಡಿರುವ ಆಸ್ತಿಯಿಂದ ವಂಚನೆಗೆ ಒಳಗಾದವರಿಗೆ ಪರಿಹಾರ ನೀಡಬೇಕು. ಇಲ್ಲವೇ ಆಂಧ್ರಪ್ರದೇಶ ಸರ್ಕಾರದಂತೆ ಇಲ್ಲಿಯೂ ರಾಜ್ಯ ಸರ್ಕಾರವೇ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಈಗಾಗಲೇ ಹಲವು ಏಜೆಂಟರು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಿಹಾರ ನೀಡುವಂತೆ ಸಂಸ್ಥೆಯ ಗ್ರಾಹಕರು, ಏಜೆಂಟರು ಡಿ.20ಕ್ಕೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಅಂದಾಜು 10ರಿಂದ 15 ಸಾವಿರ ಜನ ಸೇರುವ ಸಾಧ್ಯತೆ ಇದೆ’ ಎಂದರು.</p>.<p>ಅಸೋಸಿಯೇಷನ್ನ ಕಾರ್ಯದರ್ಶಿ ಶಂಕರ ಪರೀಟ, ಖಜಾಂಜಿ ವಿರೇಶ ಬಾರ್ಕಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾಲಿನಿ ಯಾದವಾಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಅಗ್ರಿಗೋಲ್ಡ್ ಸಂಸ್ಥೆಯಿಂದ ಲಕ್ಷಾಂತರ ಠೇವಣಿದಾರರಿಗೆ ನಷ್ಟವಾಗಿದೆ. ಸಂಸ್ಥೆಯ ಆಸ್ತಿಯನ್ನು ಮುಟ್ಟಗೋಲು ಹಾಕಿಕೊಂಡು, ಠೇವಣಿದಾರರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಬೇಕು. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳಬೇಕು’ ಎಂದು ಅಗ್ರಿಗೋಲ್ಡ್ ಗ್ರಾಹಕರು ಹಾಗೂ ಏಜೆಂಟ್ ಕ್ಷೇಮಾಭಿವೃದ್ಧಿ ಸಂಘದ ಧಾರವಾಡ ಜಿಲ್ಲಾ ಘಟಕ ಅಧ್ಯಕ್ಷ ವೀರಬಸಪ್ಪ ಅಂಕಲಿ ಒತ್ತಾಯಿಸಿದರು. </p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಗ್ರಿಗೋಲ್ಡ್ ಸಂಸ್ಥೆಯು ರಾಜ್ಯದಲ್ಲಿ ಒಟ್ಟು 8.5 ಲಕ್ಷಕ್ಕೂ ಹೆಚ್ಚು ಗ್ರಾಹಕರಿಂದ ₹1,700 ಕೋಟಿಗೂ ಅಧಿಕ ಹಣ ಸಂಗ್ರಹ ಮಾಡಿ ವಂಚನೆ ಮಾಡಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ. ಸಿಐಡಿ ಸಹ ಅಗ್ರಿಗೋಲ್ಡ್ನ ಚರಾಸ್ತಿಗಳನ್ನು ವಶಕ್ಕೆ ಪಡೆದಿದೆ. ಆದರೆ, ಈವರೆಗೆ ವಂಚನೆಗೆ ಒಳಗಾದವರಿಗೆ ಪರಿಹಾರ ದೊರಕಿಲ್ಲ’ ಎಂದರು.</p>.<p>‘ಧಾರವಾಡದಲ್ಲಿ ಮೂರು ಸಾವಿರ ಏಜೆಂಟರು ಹಾಗೂ 35 ಸಾವಿರ ಜನ ಗ್ರಾಹಕರಿದ್ದೇವೆ. ಸಂಸ್ಥೆಯಿಂದ ವಶಪಡಿಸಿಕೊಂಡಿರುವ ಆಸ್ತಿಯಿಂದ ವಂಚನೆಗೆ ಒಳಗಾದವರಿಗೆ ಪರಿಹಾರ ನೀಡಬೇಕು. ಇಲ್ಲವೇ ಆಂಧ್ರಪ್ರದೇಶ ಸರ್ಕಾರದಂತೆ ಇಲ್ಲಿಯೂ ರಾಜ್ಯ ಸರ್ಕಾರವೇ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಈಗಾಗಲೇ ಹಲವು ಏಜೆಂಟರು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಿಹಾರ ನೀಡುವಂತೆ ಸಂಸ್ಥೆಯ ಗ್ರಾಹಕರು, ಏಜೆಂಟರು ಡಿ.20ಕ್ಕೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಅಂದಾಜು 10ರಿಂದ 15 ಸಾವಿರ ಜನ ಸೇರುವ ಸಾಧ್ಯತೆ ಇದೆ’ ಎಂದರು.</p>.<p>ಅಸೋಸಿಯೇಷನ್ನ ಕಾರ್ಯದರ್ಶಿ ಶಂಕರ ಪರೀಟ, ಖಜಾಂಜಿ ವಿರೇಶ ಬಾರ್ಕಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾಲಿನಿ ಯಾದವಾಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>