<p><strong>ಹುಬ್ಬಳ್ಳಿ:</strong> ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಆಗ್ರಹಿಸಿ ಜ.21ರಂದು ನಗರದಲ್ಲಿ ಅಹಿಂದ ಸಮಾವೇಶ ಏರ್ಪಡಿಸಲಾಗಿದೆ’ ಎಂದು ಅಹಿಂದ ಸಂಘಟನೆಯ ಗೌರವ ಕಾರ್ಯದರ್ಶಿ ಸಿದ್ದು ತೇಜಿ ಹೇಳಿದರು.</p>.<p>‘ದಾವಣಗೆರೆ, ಮೈಸೂರು, ಚಿತ್ರದುರ್ಗದಲ್ಲೂ ಸಮಾವೇಶ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಸಂದೇಶ ರವಾನಿಸಲಾಗುವುದು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರಾಜ್ಯದ ವಿವಿಧೆಡೆ ಈಗಾಗಲೇ ಸಭೆ ನಡೆಸಲಾಗಿದೆ. ಸಿದ್ದರಾಮಯ್ಯ ಅವರನ್ನು ಮುಂದುವರಿಸುವ ಕುರಿತು ಕಾಂಗ್ರೆಸ್ ಪಕ್ಷದ ವರಿಷ್ಠರು ಸ್ಪಷ್ಟಪಡಿಸಿಲ್ಲ. ಹೀಗಾಗಿ, ಸಮಾವೇಶ ಅನಿವಾರ್ಯವಾಗಿದೆ’ ಎಂದರು.</p>.<p>‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಅನಿವಾರ್ಯವಾದರೆ, ಅಹಿಂದ ನಾಯಕರೊಬ್ಬರಿಗೆ ಅವಕಾಶ ಸಿಗಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಆಗ್ರಹಿಸಿ ಜ.21ರಂದು ನಗರದಲ್ಲಿ ಅಹಿಂದ ಸಮಾವೇಶ ಏರ್ಪಡಿಸಲಾಗಿದೆ’ ಎಂದು ಅಹಿಂದ ಸಂಘಟನೆಯ ಗೌರವ ಕಾರ್ಯದರ್ಶಿ ಸಿದ್ದು ತೇಜಿ ಹೇಳಿದರು.</p>.<p>‘ದಾವಣಗೆರೆ, ಮೈಸೂರು, ಚಿತ್ರದುರ್ಗದಲ್ಲೂ ಸಮಾವೇಶ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಸಂದೇಶ ರವಾನಿಸಲಾಗುವುದು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರಾಜ್ಯದ ವಿವಿಧೆಡೆ ಈಗಾಗಲೇ ಸಭೆ ನಡೆಸಲಾಗಿದೆ. ಸಿದ್ದರಾಮಯ್ಯ ಅವರನ್ನು ಮುಂದುವರಿಸುವ ಕುರಿತು ಕಾಂಗ್ರೆಸ್ ಪಕ್ಷದ ವರಿಷ್ಠರು ಸ್ಪಷ್ಟಪಡಿಸಿಲ್ಲ. ಹೀಗಾಗಿ, ಸಮಾವೇಶ ಅನಿವಾರ್ಯವಾಗಿದೆ’ ಎಂದರು.</p>.<p>‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಅನಿವಾರ್ಯವಾದರೆ, ಅಹಿಂದ ನಾಯಕರೊಬ್ಬರಿಗೆ ಅವಕಾಶ ಸಿಗಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>