<p><strong>ಧಾರವಾಡ:</strong> ‘ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಅಳವಡಿಸಲಾಗುವುದು. ನ್ಯಾಯಾಂಗದ ಕಾರ್ಯಕ್ಷಮತೆಯನ್ನು ವೃದ್ಧಿಸಲು ಕ್ರಮವಹಿಸಲಾಗುವುದು’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು.</p>.<p>ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಏಳನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಎಐ ತಂತ್ರಜ್ಞಾನ ಅಳವಡಿಕೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಅವಕಾಶಗಳಾಗಿ ಪರಿವರ್ತಿಸಿಕೊಳ್ಳುತ್ತೇವೆ. ಅದನ್ನು ವ್ಯವಸ್ಥಿತವಾಗಿ ಅಳವಡಿಸುತ್ತೇವೆ’ ಎಂದು ಹೇಳಿದರು.</p>.<p>‘ಕಾನೂನು ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ, ಉತ್ತರ ಕರ್ನಾಟಕ ವಕೀಲರ ತರಬೇತಿ ಅಕಾಡೆಮಿಗಳು ಕಾನೂನು ಶಿಕ್ಷಣ ಅಭಿವೃದ್ಧಿ ಮತ್ತು ಕಿರಿಯ ವಕೀಲರ ಪ್ರಗತಿಗೆ ಸಹಕಾರಿಯಾಗಿವೆ’ ಎಂದು ಹೇಳಿದರು.</p>.<p>ರಾಜ್ಯ ಗಡಿ ಮತ್ತು ನದಿ ಸಂರಕ್ಷಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಮಾತನಾಡಿ, ‘ತ್ವರಿತ ನ್ಯಾಯ ವ್ಯವಸ್ಥೆಗೆ ‘ಎಐ’ ತಂತ್ರಜ್ಞಾನ ಸುದ್ದಿ ‘ಪ್ರಜಾವಾಣಿ’ಯಲ್ಲಿ ಓದಿದೆ. ಸರ್ಕಾರ ‘ಎಐ ಸಂಯೋಜನೆ’ ಸಂಬಂಧಿಸಿದಂತೆ ಕಾಯ್ದೆ ರೂಪಿಸಲು ಮುಂದಾಗಿರುವುದು ಒಳ್ಳೆಯ ನಿರ್ಧಾರ’ ಎಂದು ಹೇಳಿದರು.</p>.<p>‘ಕೋರ್ಟ್ಗಳಲ್ಲಿ ಬಹಳಷ್ಟು ಪ್ರಕರಣಗಳು ದೀರ್ಘಕಾಲದಿಂದ ಬಾಕಿ ಇವೆ. ಎಐ ಅಳವಡಿಕೆಯಿಂದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಅಳವಡಿಸಲಾಗುವುದು. ನ್ಯಾಯಾಂಗದ ಕಾರ್ಯಕ್ಷಮತೆಯನ್ನು ವೃದ್ಧಿಸಲು ಕ್ರಮವಹಿಸಲಾಗುವುದು’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು.</p>.<p>ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಏಳನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಎಐ ತಂತ್ರಜ್ಞಾನ ಅಳವಡಿಕೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಅವಕಾಶಗಳಾಗಿ ಪರಿವರ್ತಿಸಿಕೊಳ್ಳುತ್ತೇವೆ. ಅದನ್ನು ವ್ಯವಸ್ಥಿತವಾಗಿ ಅಳವಡಿಸುತ್ತೇವೆ’ ಎಂದು ಹೇಳಿದರು.</p>.<p>‘ಕಾನೂನು ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ, ಉತ್ತರ ಕರ್ನಾಟಕ ವಕೀಲರ ತರಬೇತಿ ಅಕಾಡೆಮಿಗಳು ಕಾನೂನು ಶಿಕ್ಷಣ ಅಭಿವೃದ್ಧಿ ಮತ್ತು ಕಿರಿಯ ವಕೀಲರ ಪ್ರಗತಿಗೆ ಸಹಕಾರಿಯಾಗಿವೆ’ ಎಂದು ಹೇಳಿದರು.</p>.<p>ರಾಜ್ಯ ಗಡಿ ಮತ್ತು ನದಿ ಸಂರಕ್ಷಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಮಾತನಾಡಿ, ‘ತ್ವರಿತ ನ್ಯಾಯ ವ್ಯವಸ್ಥೆಗೆ ‘ಎಐ’ ತಂತ್ರಜ್ಞಾನ ಸುದ್ದಿ ‘ಪ್ರಜಾವಾಣಿ’ಯಲ್ಲಿ ಓದಿದೆ. ಸರ್ಕಾರ ‘ಎಐ ಸಂಯೋಜನೆ’ ಸಂಬಂಧಿಸಿದಂತೆ ಕಾಯ್ದೆ ರೂಪಿಸಲು ಮುಂದಾಗಿರುವುದು ಒಳ್ಳೆಯ ನಿರ್ಧಾರ’ ಎಂದು ಹೇಳಿದರು.</p>.<p>‘ಕೋರ್ಟ್ಗಳಲ್ಲಿ ಬಹಳಷ್ಟು ಪ್ರಕರಣಗಳು ದೀರ್ಘಕಾಲದಿಂದ ಬಾಕಿ ಇವೆ. ಎಐ ಅಳವಡಿಕೆಯಿಂದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>