ಹುಬ್ಬಳ್ಳಿ: ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್ ಒವೈಸಿ ಅವರು, ಇಂಡಿ ಪಂಪ್ ವೃತ್ತದಲ್ಲಿರುವ ಫತೇಶಾವಲಿ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿಅವರನ್ನು ನೋಡಲು ದರ್ಗಾ ಬಳಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸೋಮವಾರ ಹುಬ್ಬಳ್ಳಿಗೆ ಅವರು ಬಂದಿದ್ದಾರೆ.
ಕೋವಿಡ್ ನಿಯಮ ಲೆಕ್ಕಿಸದೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರನ್ನುಚದುರಿಸಲು ಪೊಲೀಸರು ಪರದಾಡಿದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸಂಜೆ 6ಕ್ಕೆ ಒವೈಸಿ ಅವರು ದರ್ಗಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಸ್ಥಳೀಯ ಮುಖಂಡರು ತಿಳಿಸಿದ್ದರು. ಆದರೆ, 7 ಗಂಟೆಯಾದರೂ ಬಂದಿಲ್ಲ.