<p><strong>ಕಲಘಟಗಿ:</strong> ಪಟ್ಟಣದ ತಾಲ್ಲೂಕು ಪಂಚಾಯಿತಿಯ ಮಳಿಗೆಯಲ್ಲಿ ಆರಂಭವಾದ ಅಕ್ಕ ಕೆಫೆ ಉಪಾಹಾರ ಗೃಹವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಗಳವಾರ ಉದ್ಘಾಟಿಸಿದರು.</p>.<p>ನಂತರ ಮಾತನಾಡಿ, ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಮಹಿಳೆಯರು ಸಾವಲಂಬಿ ಬದುಕು ಕಟ್ಟಿಕೊಳ್ಳಲು ಅಕ್ಕ ಕೆಫೆಗಳನ್ನು ಆರಂಭಿಸಲಾಗಿದೆ ಎಂದರು.</p>.<p>ಅಕ್ಕ ಕೆಫೆ ಮಹಿಳೆಯರಿಂದಲೇ ನಡೆಯುತ್ತದೆ. ಇಲ್ಲಿ ಶುಚಿ, ರುಚಿಯಾದ ಆಹಾರ ಸಿಗುತ್ತದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಅಂಗನವಾಡಿ ಕೇಂದ್ರಗಳಿಗೆ ಟಿ.ವಿ ವಿತರಣೆ: ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಟಿ.ವಿ ಹಾಗೂ ಮಕ್ಕಳ ಆಟಿಗೆ ಸಾಮಗ್ರಿಗಳ ಕಿಟ್ ಅನ್ನು ಸಚಿವರು ವಿತರಿಸಿದರು.</p>.<p>ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಆರ್ ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ತಾ.ಪಂ ಇಒ ಪರಶುರಾಮ ಸಾವಂತ, ತಹಶೀಲ್ದಾರ್ ಬಸವರಾಜ ಹೊಂಕಣದವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ:</strong> ಪಟ್ಟಣದ ತಾಲ್ಲೂಕು ಪಂಚಾಯಿತಿಯ ಮಳಿಗೆಯಲ್ಲಿ ಆರಂಭವಾದ ಅಕ್ಕ ಕೆಫೆ ಉಪಾಹಾರ ಗೃಹವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಗಳವಾರ ಉದ್ಘಾಟಿಸಿದರು.</p>.<p>ನಂತರ ಮಾತನಾಡಿ, ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಮಹಿಳೆಯರು ಸಾವಲಂಬಿ ಬದುಕು ಕಟ್ಟಿಕೊಳ್ಳಲು ಅಕ್ಕ ಕೆಫೆಗಳನ್ನು ಆರಂಭಿಸಲಾಗಿದೆ ಎಂದರು.</p>.<p>ಅಕ್ಕ ಕೆಫೆ ಮಹಿಳೆಯರಿಂದಲೇ ನಡೆಯುತ್ತದೆ. ಇಲ್ಲಿ ಶುಚಿ, ರುಚಿಯಾದ ಆಹಾರ ಸಿಗುತ್ತದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಅಂಗನವಾಡಿ ಕೇಂದ್ರಗಳಿಗೆ ಟಿ.ವಿ ವಿತರಣೆ: ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಟಿ.ವಿ ಹಾಗೂ ಮಕ್ಕಳ ಆಟಿಗೆ ಸಾಮಗ್ರಿಗಳ ಕಿಟ್ ಅನ್ನು ಸಚಿವರು ವಿತರಿಸಿದರು.</p>.<p>ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಆರ್ ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ತಾ.ಪಂ ಇಒ ಪರಶುರಾಮ ಸಾವಂತ, ತಹಶೀಲ್ದಾರ್ ಬಸವರಾಜ ಹೊಂಕಣದವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>