<p><strong>ಕಲಘಟಗಿ</strong>: ’ಬಸವಾದಿ ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಶರಣರ ಮಾರ್ಗದಲ್ಲಿ ನಡೆದರೆ ಜೀವನ ಪಾವನವಾಗುತ್ತದೆ’ ಎಂದು ಹೊಸದುರ್ಗದ ಬಸವಾಶ್ರಮದ ಅಕ್ಕಮಹಾದೇವಿ ಮಾತಾಜಿ ತಿಳಿಸಿದರು.</p>.<p>ತಾಲ್ಲೂಕಿನ ಹಿರೇಹೊನ್ನಳ್ಳಿ ಗ್ರಾಮದ ಅನುಭವ ಮಂಟಪದಲ್ಲಿ ಬಸವ ತತ್ವ ಲಿಂಗಾನುಭಾವಿ ಶರಣರ ಬಳಗದಿಂದ ’ವಚನ ಶ್ರಾವಣ’ ಅಂಗವಾಗಿ ನಡೆದ ’ವಚನದರ್ಶನ’ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶರಣರು ಕೊಟ್ಟ ಅಷ್ಟಾವರಣ, ಪಂಚಾಚಾರ ಮತ್ತು ಷಟಸ್ಥಲಗಳು ನಮ್ಮ ಜೀವನಕ್ಕೆ ಭದ್ರ ಬುನಾದಿಗಳಾಗಬೇಕು ಎಂದು ಪ್ರವಚನ ಮೂಲಕ ತಿಳಿಸಿದರು.</p>.<p>ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯಲ್ಲಪ್ಪ ದಾಸನಕೊಪ್ಪ ಹಾಗೂ ಕುಟುಂಬ ವರ್ಗದವರು ವಚನ ಶ್ರಾವಣದ ಅಂಗವಾಗಿ ಭಕ್ತರಿಗೆ ಅನ್ನ ದಾಸೋಹ ಏರ್ಪಡಿಸಿದ್ದರು. ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸುತ್ತಮುತ್ತಲಿನ ಗ್ರಾಮಸ್ಥರು, ಶರಣ ಶರಣೆಯರು ಮಹಿಳಾ ಸಂಘದ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ</strong>: ’ಬಸವಾದಿ ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಶರಣರ ಮಾರ್ಗದಲ್ಲಿ ನಡೆದರೆ ಜೀವನ ಪಾವನವಾಗುತ್ತದೆ’ ಎಂದು ಹೊಸದುರ್ಗದ ಬಸವಾಶ್ರಮದ ಅಕ್ಕಮಹಾದೇವಿ ಮಾತಾಜಿ ತಿಳಿಸಿದರು.</p>.<p>ತಾಲ್ಲೂಕಿನ ಹಿರೇಹೊನ್ನಳ್ಳಿ ಗ್ರಾಮದ ಅನುಭವ ಮಂಟಪದಲ್ಲಿ ಬಸವ ತತ್ವ ಲಿಂಗಾನುಭಾವಿ ಶರಣರ ಬಳಗದಿಂದ ’ವಚನ ಶ್ರಾವಣ’ ಅಂಗವಾಗಿ ನಡೆದ ’ವಚನದರ್ಶನ’ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶರಣರು ಕೊಟ್ಟ ಅಷ್ಟಾವರಣ, ಪಂಚಾಚಾರ ಮತ್ತು ಷಟಸ್ಥಲಗಳು ನಮ್ಮ ಜೀವನಕ್ಕೆ ಭದ್ರ ಬುನಾದಿಗಳಾಗಬೇಕು ಎಂದು ಪ್ರವಚನ ಮೂಲಕ ತಿಳಿಸಿದರು.</p>.<p>ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯಲ್ಲಪ್ಪ ದಾಸನಕೊಪ್ಪ ಹಾಗೂ ಕುಟುಂಬ ವರ್ಗದವರು ವಚನ ಶ್ರಾವಣದ ಅಂಗವಾಗಿ ಭಕ್ತರಿಗೆ ಅನ್ನ ದಾಸೋಹ ಏರ್ಪಡಿಸಿದ್ದರು. ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸುತ್ತಮುತ್ತಲಿನ ಗ್ರಾಮಸ್ಥರು, ಶರಣ ಶರಣೆಯರು ಮಹಿಳಾ ಸಂಘದ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>