‘ಇದೇ ರೀತಿ ಜಲಾಶಯಕ್ಕೆ ನೀರು ಹರಿದು ಬರುತ್ತಾ ಸಾಗಿದರೇ ಹಿಂಗಾರು ಹಂಗಾಮಿಗೂ ನೀರು ಹರಿಸುವ ಸಾಧ್ಯತೆ ಇದೆ. ಈಗ ನವೆಂಬರ್ 23ರ ವರೆಗೆ ಮುಂಗಾರು ಹಂಗಾಮಿಗೆ ನೀರು ಹರಿಸಿದ ನಂತರ ಆಗಿನ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದ ನೀರಿನ ಸಂಗ್ರಹ ಮಟ್ಟ ನೋಡಿಕೊಂಡು, 2024 ಜುಲೈ ವರೆಗೂ ಕುಡಿಯುವ ನೀರು, ಭಾಷ್ಪೀಭವನ, ಕೈಗಾರಿಕೆ, ವಿದ್ಯುತ್ ಸ್ಥಾವರ ಸೇರಿ ನಾನಾ ಉಪಯೋಗಕ್ಕೆ 56 ಟಿಎಂಸಿ ಅಡಿಯಷ್ಟು ನೀರು ಸಂಗ್ರಹ ಇಟ್ಟುಕೊಂಡು ಹೆಚ್ಚುವರಿ ನೀರನ್ನು ಮಾತ್ರ ಕಾಲುವೆಗೆ ಹರಿಸುವ ಸಾಧ್ಯತೆಯಿದೆ. ಸದ್ಯಕ್ಕಂತೂ ಮುಂಗಾರು ಹಂಗಾಮಿಗೆ ನೀರು ಹರಿಸಲು ಯಾವುದೇ ನೀರಿನ ಕೊರತೆಯಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.