ತಾಲ್ಲೂಕಿನ ತುಮರಿಕೊಪ್ಪ ಗ್ರಾಮದ ಸಂತ ಕ್ಸೇವಿಯರ್ಸ್ ಪ್ರೌಢಶಾಲೆಯಲ್ಲಿ ಆರೋಗ್ಯ ಇಲಾಖೆ ಆಯೋಜಿಸಿದ್ದ ತಾಲ್ಲೂಕ ಮಟ್ಟದ ರಾಷ್ಟ್ರೀಯ ಜಂತು ಹುಳು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲ್ಲೂಕು ಆರೋಗ್ಯಧಿಕಾರಿ ಎನ್.ಬಿ. ಕರ್ಲವಾಡ ಮಾತನಾಡಿ, ಮಕ್ಕಳು ಸೇವಿಸುವ ಆಹಾರದಲ್ಲಿ ಪೌಷ್ಟಿಕತೆ ಕೊರತೆ ಒಂದೆಡೆಯಾದರೆ, ಮಕ್ಕಳ ದೇಹದಲ್ಲಿ ಜಂತು ಹುಳುಗಳು ಆಹಾರ ಕಬಳಿಸಿ ಮಕ್ಕಳನ್ನ ಅನಾರೋಗ್ಯಕ್ಕೆ ಸಿಲುಕಿಸುತ್ತವೆ ಎಂದರು.