ಧಾರವಾಡದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಬೆಂಗಳೂರು ಭವಾನಿ ದತ್ತಪೀಠದ ಗೋಸಾಯಿ ಮಠದ ಮಂಜುನಾಥ ಭಾರತಿ ಸ್ವಾಮೀಜಿ, ಕುಂಬಾರ್ಡಾ ಹಂಡಿಬಡಂಗನಾಥ ಪೀರಯೋಗಿ ಮೋಹನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಜಾತ್ರಾ ಸಮಿತಿ ಅಧ್ಯಕ್ಷ ಬಿ.ಎ. ಪಾಟೀಲ ಇದ್ದರು.