<p><strong>ಅಳ್ನಾವರ</strong>: ಪಟ್ಟಣ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಬೆಳಗಿನ ಜಾವದವರೆಗೆ 47 ಮಿಮೀ., ಮಳೆ ಬಿದ್ದಿದೆ.</p><p>ಸಮೀಪದ ಹೂಲಿಕೇರಿ ಇಂದಿರಮ್ಮನ ಕೆರೆ ತುಂಬಿ ಕೋಡಿ ಬಿದ್ದು, ಕಟ್ಟೆ ಮೇಲೆ ನೀರು ಹರಿಯುತ್ತಿದೆ.</p>.<p>ಮಂಗಳವಾರ ಮಧ್ಯಾಹ್ನ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ ವಿವಿಧ ಇಲಾಖೆಯ ಅಧಿಕಾರಿ ತಂಡದೊಂದಿಗೆ ಕೆರೆಗೆ ಭೇಟಿ ನೀಡಿ, ಪರಿಶೀಲಿಸಿದರು. </p>.<p>ನಂತರ ಮಾತನಾಡಿದ ಅವರು, ’ಕೆರೆ ಹಾಗೂ ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಂಭವ ಇದೆ. ಕೆರೆಯ ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಹಳ್ಳದ ಸಮೀಪ ಸಾರ್ವಜನಿಕರು ಬರಬಾರದು, ಜಾನುವಾರಗಳನ್ನೂ ಬಿಡಬಾರದು ಎಂದು ಜನರಿಗೆ ಸೂಚಿಸಲಾಗಿದೆ‘ ಎಂದರು. </p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಕಾಶ ಮುಗದಮ, ಶ್ರೀಕಾಂತ ಗಾಯಕವಾಡ, ವಿನಾಯಕ ಕುರುಬರ, ಪರಶುರಾಮ ಮಿಂಡೋಳಕರ, ಸಲೀಂ ಜಾಗಿರದಾರ, ಶಿವಾಜಿ ಡೊಳ್ಳಿನ,<br /> ಸಣ್ಣ ನೀರಾವರಿ, ಕಂದಾಯ, ಪೊಲೀಸ್ ಇಲಾಖೆ ಸಿಬ್ಬಂದಿ, ಗ್ರಾಮದ ಮುಖಂಡರು ಇದ್ದರು.</p>.<p>ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ತತ್ತರಿಸಿರುವ ಜನರು ಕೆಲಸ ಕಾರ್ಯ ಬಿಟ್ಟು ಮನೆಯಲ್ಲಿಯೇ ಕುಳಿತುಕೊಳ್ಳುವಂತಾಗಿದೆ. ಸತತ ಮಳೆಗೆ ಕೆರೆ ಹಳ್ಳಗಳು ತುಂಬಿ ಹರಿಯುತ್ತಿವೆ. </p>.<p>ತಾಲ್ಲೂಕಿನ ಕುಂಬಾರಕೊಪ್ಪ, ಸಿದ್ದಾಪೂರ, ಕಿವಡೆಬೈಲ ಮತ್ತಿತರ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡು ವಾಹನಗಳ ಓಡಾಟ ಸ್ಥಗಿತಗೊಂಡಿತ್ತು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳ್ನಾವರ</strong>: ಪಟ್ಟಣ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಬೆಳಗಿನ ಜಾವದವರೆಗೆ 47 ಮಿಮೀ., ಮಳೆ ಬಿದ್ದಿದೆ.</p><p>ಸಮೀಪದ ಹೂಲಿಕೇರಿ ಇಂದಿರಮ್ಮನ ಕೆರೆ ತುಂಬಿ ಕೋಡಿ ಬಿದ್ದು, ಕಟ್ಟೆ ಮೇಲೆ ನೀರು ಹರಿಯುತ್ತಿದೆ.</p>.<p>ಮಂಗಳವಾರ ಮಧ್ಯಾಹ್ನ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ ವಿವಿಧ ಇಲಾಖೆಯ ಅಧಿಕಾರಿ ತಂಡದೊಂದಿಗೆ ಕೆರೆಗೆ ಭೇಟಿ ನೀಡಿ, ಪರಿಶೀಲಿಸಿದರು. </p>.<p>ನಂತರ ಮಾತನಾಡಿದ ಅವರು, ’ಕೆರೆ ಹಾಗೂ ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಂಭವ ಇದೆ. ಕೆರೆಯ ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಹಳ್ಳದ ಸಮೀಪ ಸಾರ್ವಜನಿಕರು ಬರಬಾರದು, ಜಾನುವಾರಗಳನ್ನೂ ಬಿಡಬಾರದು ಎಂದು ಜನರಿಗೆ ಸೂಚಿಸಲಾಗಿದೆ‘ ಎಂದರು. </p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಕಾಶ ಮುಗದಮ, ಶ್ರೀಕಾಂತ ಗಾಯಕವಾಡ, ವಿನಾಯಕ ಕುರುಬರ, ಪರಶುರಾಮ ಮಿಂಡೋಳಕರ, ಸಲೀಂ ಜಾಗಿರದಾರ, ಶಿವಾಜಿ ಡೊಳ್ಳಿನ,<br /> ಸಣ್ಣ ನೀರಾವರಿ, ಕಂದಾಯ, ಪೊಲೀಸ್ ಇಲಾಖೆ ಸಿಬ್ಬಂದಿ, ಗ್ರಾಮದ ಮುಖಂಡರು ಇದ್ದರು.</p>.<p>ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ತತ್ತರಿಸಿರುವ ಜನರು ಕೆಲಸ ಕಾರ್ಯ ಬಿಟ್ಟು ಮನೆಯಲ್ಲಿಯೇ ಕುಳಿತುಕೊಳ್ಳುವಂತಾಗಿದೆ. ಸತತ ಮಳೆಗೆ ಕೆರೆ ಹಳ್ಳಗಳು ತುಂಬಿ ಹರಿಯುತ್ತಿವೆ. </p>.<p>ತಾಲ್ಲೂಕಿನ ಕುಂಬಾರಕೊಪ್ಪ, ಸಿದ್ದಾಪೂರ, ಕಿವಡೆಬೈಲ ಮತ್ತಿತರ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡು ವಾಹನಗಳ ಓಡಾಟ ಸ್ಥಗಿತಗೊಂಡಿತ್ತು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>