<p><strong>ಅಳ್ನಾವರ</strong>: ‘ಕೃಷಿ ಚಟುವಟಿಕೆ ಜತೆಗೆ ಜೇನು ಸಾಕಾಣಿಕೆ ಮಾಡಿದರೆ ಉತ್ತಮ ಆದಾಯ ಪಡೆಯಬಹುದು’ ಎಂದು ತಾಲ್ಲೂಕು ಪಂಚಾಯಿತಿ ಇಒ ಪ್ರಶಾಂತ ತುರ್ಕಾಣಿ ಹೇಳಿದರು.</p>.<p>ಧಾರವಾಡ ತೋಟಗಾರಿಕೆ ಇಲಾಖೆ, ಬಾಗಲಕೋಟಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ಇಲ್ಲಿನ ಜೇನು ಕೃಷಿ ತರಬೇತಿ ಕೇಂದ್ರದಲ್ಲಿ ಶುಕ್ರವಾರ ನಡೆದ ‘ಸರ್ವೋತೋಮುಖ ಅಭಿವೃದ್ಧಿಗಾಗಿ ಜೇನುಕೃಷಿ’ ಕಾರ್ಯಾಗಾರ ಉದ್ಘಾಟಿಸಿ <br> ಅವರು ಮಾತನಾಡಿದರು.</p>.<p>‘ವೈಜ್ಞಾನಿಕ ಪದ್ಧತಿಯಿಂದ ಜೇನು ಸಾಕಾಣಿಕೆ ಕೈಗೊಳ್ಳಬೇಕು. ಜೇನು ನೊಣಗಳ ಪರಾಗ ಸ್ಪರ್ಶದಿಂದ ಇತರ ಬೆಳೆಗಳ ಇಳುವರಿಯೂ ಗಣನೀಯವಾಗಿ ಹೆಚ್ಚಳವಾಗುತ್ತವೆ. ರೈತರು ಜೇನು ಸಾಕಾಣಿಕೆಯನ್ನು ಉಪ ಕಸುಬಾಗಿ ಮಾಡಬಕು’ ಎಂದರು.</p>.<p>ಧಾರವಾಡ ಜಿಲ್ಲಾ ಪಂಚಾಯಿತಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಇಮ್ತಿಯಾಜ್ ಚಂಗಾಪೂರಿ ಅಧ್ಯಕ್ಷತೆ ವಹಿಸಿದ್ದರು. ಸಹ ಸಂಶೋಧನಾ ಹಾಗೂ <br> ವಿಸ್ತರಣಾ ನಿರ್ದೇಶಕ ಜೆ.ಬಿ.ಗೋಪಾಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.</p>.<p>ಜಗದೀಶ ಬಾಳಿಕಾಯಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳಾದ ಜಿ.ಪಲ್ಲವಿ, ಮಹಾಂತೇಶ ಪಟ್ಟಣಶೆಟ್ಟಿ, ದೀಪ್ತಿ ವಾಲಿ ಇದ್ದರು.</p>.<p>ತರಬೇತಿ ಕಾರ್ಯಾಗಾರದಲ್ಲಿ ಧಾರವಾಡ ಜಿಲ್ಲೆಯ ವಿವಿಧೆಡೆಯಿಂದ ಜೇನು ಕೃಷಿಯಲ್ಲಿ ಆಸಕ್ತಿ ಇದ್ದ 50 ಜನ ಭಾಗವಹಿಸಿದ್ದರು.</p>.<p>ತರಬೇತಿಯಲ್ಲಿ ಜೇನು ನೊಣಗಳ ಜೀವನ ಕ್ರಮ, ತಳಿಗಳ ಮಹತ್ವ, ಜೇನು ಸಾಕಾಣಿಕೆ ಬಗೆ, ಜೇನಿನ ಪೆಟ್ಟಿಗೆ ನಿರ್ಹಹಣೆ, ಜೇನು ಕೃಷಿಯಿಂದ ಆದಾಯ ಪಡೆಯುವ ಬಗೆ ಕುರಿತು ಮಾಹಿತಿ ನೀಡಲಾಯಿತು. ಜೇನು ಸಾಕಾಣಿಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳ್ನಾವರ</strong>: ‘ಕೃಷಿ ಚಟುವಟಿಕೆ ಜತೆಗೆ ಜೇನು ಸಾಕಾಣಿಕೆ ಮಾಡಿದರೆ ಉತ್ತಮ ಆದಾಯ ಪಡೆಯಬಹುದು’ ಎಂದು ತಾಲ್ಲೂಕು ಪಂಚಾಯಿತಿ ಇಒ ಪ್ರಶಾಂತ ತುರ್ಕಾಣಿ ಹೇಳಿದರು.</p>.<p>ಧಾರವಾಡ ತೋಟಗಾರಿಕೆ ಇಲಾಖೆ, ಬಾಗಲಕೋಟಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ಇಲ್ಲಿನ ಜೇನು ಕೃಷಿ ತರಬೇತಿ ಕೇಂದ್ರದಲ್ಲಿ ಶುಕ್ರವಾರ ನಡೆದ ‘ಸರ್ವೋತೋಮುಖ ಅಭಿವೃದ್ಧಿಗಾಗಿ ಜೇನುಕೃಷಿ’ ಕಾರ್ಯಾಗಾರ ಉದ್ಘಾಟಿಸಿ <br> ಅವರು ಮಾತನಾಡಿದರು.</p>.<p>‘ವೈಜ್ಞಾನಿಕ ಪದ್ಧತಿಯಿಂದ ಜೇನು ಸಾಕಾಣಿಕೆ ಕೈಗೊಳ್ಳಬೇಕು. ಜೇನು ನೊಣಗಳ ಪರಾಗ ಸ್ಪರ್ಶದಿಂದ ಇತರ ಬೆಳೆಗಳ ಇಳುವರಿಯೂ ಗಣನೀಯವಾಗಿ ಹೆಚ್ಚಳವಾಗುತ್ತವೆ. ರೈತರು ಜೇನು ಸಾಕಾಣಿಕೆಯನ್ನು ಉಪ ಕಸುಬಾಗಿ ಮಾಡಬಕು’ ಎಂದರು.</p>.<p>ಧಾರವಾಡ ಜಿಲ್ಲಾ ಪಂಚಾಯಿತಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಇಮ್ತಿಯಾಜ್ ಚಂಗಾಪೂರಿ ಅಧ್ಯಕ್ಷತೆ ವಹಿಸಿದ್ದರು. ಸಹ ಸಂಶೋಧನಾ ಹಾಗೂ <br> ವಿಸ್ತರಣಾ ನಿರ್ದೇಶಕ ಜೆ.ಬಿ.ಗೋಪಾಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.</p>.<p>ಜಗದೀಶ ಬಾಳಿಕಾಯಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳಾದ ಜಿ.ಪಲ್ಲವಿ, ಮಹಾಂತೇಶ ಪಟ್ಟಣಶೆಟ್ಟಿ, ದೀಪ್ತಿ ವಾಲಿ ಇದ್ದರು.</p>.<p>ತರಬೇತಿ ಕಾರ್ಯಾಗಾರದಲ್ಲಿ ಧಾರವಾಡ ಜಿಲ್ಲೆಯ ವಿವಿಧೆಡೆಯಿಂದ ಜೇನು ಕೃಷಿಯಲ್ಲಿ ಆಸಕ್ತಿ ಇದ್ದ 50 ಜನ ಭಾಗವಹಿಸಿದ್ದರು.</p>.<p>ತರಬೇತಿಯಲ್ಲಿ ಜೇನು ನೊಣಗಳ ಜೀವನ ಕ್ರಮ, ತಳಿಗಳ ಮಹತ್ವ, ಜೇನು ಸಾಕಾಣಿಕೆ ಬಗೆ, ಜೇನಿನ ಪೆಟ್ಟಿಗೆ ನಿರ್ಹಹಣೆ, ಜೇನು ಕೃಷಿಯಿಂದ ಆದಾಯ ಪಡೆಯುವ ಬಗೆ ಕುರಿತು ಮಾಹಿತಿ ನೀಡಲಾಯಿತು. ಜೇನು ಸಾಕಾಣಿಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>