<p>ಅಳ್ನಾವರ: ತಾಲ್ಲೂಕಿನ ಕಡಬಗಟ್ಟಿ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ಮಂಗಳವಾರ ಪಿಂಚಣಿದಾರರ ಅಹವಾಲು ಆಲಿಕೆ ಸಭೆ ನಡೆಯಿತು. ಅಧಿಕಾರಿಗಳು ಸಾರ್ವಜನಿಕರ ದೂರು ಸ್ವೀಕರಿಸಿ, ಪರಿಹಾರ ಒದಗಿಸುವ ಭರವಸೆ ನೀಡಿದರು.</p>.<p>ಸರ್ಕಾರದ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಕಳೆದ ಕೆಲ ತಿಂಗಳಿನಿಂದ ಮಾಸಾಶನ ಹಣ ಬಾರದಿರುವ ಕುರಿತು ಈಚೆಗೆ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾಪವಾಗಿತ್ತು. ಈ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.</p>.<p>300ಕ್ಕೂ ಅಧಿಕ ಪಿಂಚಣಿದಾರರಿಗೆ ಹಣ ಬಾರದೆ ತೊಂದರೆ ಉಂಟಾಗಿದೆ. ಮಾಸಾಶನ ಮರು ಪ್ರಾರಂಭಕ್ಕಾಗಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಕಚೇರಿಗಳಿಗೆ ಅಲೆಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಫಲಾನುಭವಿಗಳು ಹೇಳಿದರು.</p>.<p>ಕಂದಾಯ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಸ್ವೀಕರಿಸಿ, ‘ನೈಜ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗದಂತೆ ಮಾಸಾಶನವನ್ನು ಶೀಘ್ರವೇ ಮರು ಆರಂಭಿಸಲಾಗುವುದು’ ಎಂದು ತಿಳಿಸಿದರು.</p>.<p>ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ವಿನಾಯಕ ಕುರುಬರ ಮಾತನಾಡಿ, ಅರ್ಹ ಪಿಂಚಣಿದಾರರಿಗೆ ಸಕಾಲದಲ್ಲಿ ಮಾಸಾಶನ ವಿತರಣೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಗ್ರಾಮದ ಶಿವಾನಂದ ಗೋವಿನಕೊಪ್ಪ ನೇತೃತ್ವದಲ್ಲಿ ಕಡಬಗಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಲಿಕೇರಿ, ಕಡಬಗಟ್ಟಿ, ಕಾಶೇನಟ್ಟಿ ಗ್ರಾಮಗಳ ಫಲಾನುಭವಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<p>ಉಪತಹಶೀಲ್ದಾರ್ ಮಲ್ಲಿಕಾರ್ಜುನ ಬಿರಾದಾರ, ಕಂದಾಯ ನಿರೀಕ್ಷಕ ಸಂಪತಕುಮಾರ ಗುರು ಒಡೆಯರ, ಗ್ರಾಮ ಆಡಳಿತಾಧಿಕಾರಿ ತಯ್ಯಬಾ ಚೌದರಿ, ಪಿಡಿಒ ಆನಂದ ಪಾಟೀಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-24-408590409</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಳ್ನಾವರ: ತಾಲ್ಲೂಕಿನ ಕಡಬಗಟ್ಟಿ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ಮಂಗಳವಾರ ಪಿಂಚಣಿದಾರರ ಅಹವಾಲು ಆಲಿಕೆ ಸಭೆ ನಡೆಯಿತು. ಅಧಿಕಾರಿಗಳು ಸಾರ್ವಜನಿಕರ ದೂರು ಸ್ವೀಕರಿಸಿ, ಪರಿಹಾರ ಒದಗಿಸುವ ಭರವಸೆ ನೀಡಿದರು.</p>.<p>ಸರ್ಕಾರದ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಕಳೆದ ಕೆಲ ತಿಂಗಳಿನಿಂದ ಮಾಸಾಶನ ಹಣ ಬಾರದಿರುವ ಕುರಿತು ಈಚೆಗೆ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾಪವಾಗಿತ್ತು. ಈ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.</p>.<p>300ಕ್ಕೂ ಅಧಿಕ ಪಿಂಚಣಿದಾರರಿಗೆ ಹಣ ಬಾರದೆ ತೊಂದರೆ ಉಂಟಾಗಿದೆ. ಮಾಸಾಶನ ಮರು ಪ್ರಾರಂಭಕ್ಕಾಗಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಕಚೇರಿಗಳಿಗೆ ಅಲೆಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಫಲಾನುಭವಿಗಳು ಹೇಳಿದರು.</p>.<p>ಕಂದಾಯ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಸ್ವೀಕರಿಸಿ, ‘ನೈಜ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗದಂತೆ ಮಾಸಾಶನವನ್ನು ಶೀಘ್ರವೇ ಮರು ಆರಂಭಿಸಲಾಗುವುದು’ ಎಂದು ತಿಳಿಸಿದರು.</p>.<p>ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ವಿನಾಯಕ ಕುರುಬರ ಮಾತನಾಡಿ, ಅರ್ಹ ಪಿಂಚಣಿದಾರರಿಗೆ ಸಕಾಲದಲ್ಲಿ ಮಾಸಾಶನ ವಿತರಣೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಗ್ರಾಮದ ಶಿವಾನಂದ ಗೋವಿನಕೊಪ್ಪ ನೇತೃತ್ವದಲ್ಲಿ ಕಡಬಗಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಲಿಕೇರಿ, ಕಡಬಗಟ್ಟಿ, ಕಾಶೇನಟ್ಟಿ ಗ್ರಾಮಗಳ ಫಲಾನುಭವಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<p>ಉಪತಹಶೀಲ್ದಾರ್ ಮಲ್ಲಿಕಾರ್ಜುನ ಬಿರಾದಾರ, ಕಂದಾಯ ನಿರೀಕ್ಷಕ ಸಂಪತಕುಮಾರ ಗುರು ಒಡೆಯರ, ಗ್ರಾಮ ಆಡಳಿತಾಧಿಕಾರಿ ತಯ್ಯಬಾ ಚೌದರಿ, ಪಿಡಿಒ ಆನಂದ ಪಾಟೀಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-24-408590409</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>