ನೂತನ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಸಚಿವರು ಭೇಟಿ ನೀಡಿ ಮಾಹಿತಿ ಪಡೆದರು. ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ಬಾಣಂತಿಯರ ಆರೋಗ್ಯ ವಿಚಾರಿಸಿದರು. ರೋಗಿಗಳ ಜೊತೆ ಮಾತನಾಡಿ, ಚಿಕಿತ್ಸೆ ವ್ಯವಸ್ಥೆ ಹೇಗಿದೆ ಎಂದು ಕೇಳಿದರು. ಶಾಸಕ ಸಿ.ಎಂ. ನಿಂಬಣ್ಣವರ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಾ ರವಳಪ್ಪನವರ, ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್, ಡಿಎಚ್ಒ ಡಾ. ಯಶವಂತ ಮದೀನಕರ, ತಹಶೀಲ್ದಾರ್ ಅಮರೇಶ ಪಮ್ಮಾರ,
ಡಾ. ಅಯ್ಯನಗೌಡ ಪಾಟೀಲ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳದ ಅಧ್ಯಕ್ಷೆ ಸವಿತಾ ಅಮರಶೆಟ್ಟಿ , ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಸುಶೀಲಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ, ಡಾ. ತನುಜಾ, ಜೆ.ಬಿ. ಜಾಧವ, ಡಾ. ಅಯ್ಯನಗೌಡ ಪಾಟೀಲ, ಎಂ.ಸಿ. ಹಿರೇಮಠ, ಕೃಷ್ಣ ಅಷ್ಟೇಕರ, ಅಮೂಲ ಗುಂಜೀಕರ, ಜೈಲಾನಿ ಸುದರ್ಜಿ , ಸುನಂದಾ ಕಲ್ಲು ಇದ್ದರು.