<p><strong>ಅಳ್ನಾವರ:</strong> ಇಲ್ಲಿನ ಇಂದಿರಾ ನಗರ ಬಡಾವಣೆಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಹಾಗೂ ಇನ್ನುಳಿದ ದೇವತೆಗಳ ಪ್ರಾಣ ಪ್ರತಿಷ್ಠಾಪನೆಯ 9ನೇ ವಾರ್ಷಿಕೋತ್ಸವ ಭಾನುವಾರ ನಡೆಯಿತು.</p>.<p>ಭಾರತ ಹುಣ್ಣಿಮೆಯ ಶುಭ ದಿನದಂದು ನಡೆದ ಧಾರ್ಮಿಕ ಕೈಂಕರ್ಯಗಳು ಪಟ್ಟಣದಲ್ಲಿ ಭಕ್ತಿಲೋಕ ಸೃಷ್ಟಿಸಿದ್ದವು. ಶನಿವಾರ ಮತ್ತು ಭಾನುವಾರ ಎರಡೂ ದಿನ ಭಕ್ತರ ದಂಡು ದೇವಸ್ಥಾನಕ್ಕೆ ಹರಿದು ಬಂತು. </p>.<p>ಭಾನುವಾರ ಬೆಳಗಿನ ಜಾವ 5 ಗಂಟೆಗೆ ರುದ್ರಾಭಿಷೇಕ ಸೇರಿದಂತೆ ಸಕಲ ಧಾರ್ಮಿಕ ವಿಧಿಗಳು ಆರಂಭವಾದವು. ಪ್ರಮುಖ ಘಟ್ಟ ಗುಗ್ಗಳೋತ್ಸವದಲ್ಲಿ 15 ಜನರು ಶುಭ್ರ ವಸ್ತ್ರಧಾರಿಗಳಾಗಿ ಕೈಯಲ್ಲಿ ಕುಂಭಗಳನ್ನು ಹಿಡಿದು ಶ್ರದ್ಧೆಯಿಂದ ಭಾಗಿಯಾದರು. ಸವಣೂರಿನ ನಾಗಪ್ಪ ಕುಂಬಾರ ತಂಡದ ವೀರಗಾಸೆಯ ನಿನಾದ ಪಟ್ಟಣದ ತುಂಬ ಹರಡಿತ್ತು.</p>.<p>ಭಕ್ತರು ಪಲ್ಲಕ್ಕಿ ಹೊತ್ತು ಸಾಗಿದರು. ಪ್ರತಿ ಮನೆ ಎದುರು ಪಲ್ಲಕ್ಕಿ ಬಂದಾಗ ಭಕ್ತರು ನೀರು ಹಾಕಿ ಆರತಿ ಮಾಡಿ ಭಕ್ತಿ ಸೇವೆ ಸಲ್ಲಿಸಿದರು. ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಗೆ ಮೆರುಗು ಮೂಡಿಸಿದ್ದರು.</p>.<p>ದೇವಸ್ಥಾನದ ಆವರಣದಲ್ಲಿ ಪುರವಂತರ ವೀರಾವೇಶದ ನುಡಿ, ಒಡಪುಗಳನ್ನು ಭಕ್ತರು ಆಸಕ್ತಿಯಿಂದ ಆಲಿಸಿದರು. ಪುರವಂತರ ದಕ್ಷಿಣ ಬ್ರಹ್ಮ ಸಂವಾರ ಸನ್ನಿವೇಶ<br /> ಪ್ರದರ್ಶನ ಗಮನ ಸೆಳೆಯಿತು. ದೇವಸ್ಥಾನದಲ್ಲಿನ ಭದ್ರಕಾಳಿ, ಗಣೇಶ, ನಾಗದೇವತಾ, ಬಸವಣ್ಣ ಮೂರ್ತಿಗಳನ್ನು ಸಿಂಗರಿಸಲಾಗಿತ್ತು. ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳ್ನಾವರ:</strong> ಇಲ್ಲಿನ ಇಂದಿರಾ ನಗರ ಬಡಾವಣೆಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಹಾಗೂ ಇನ್ನುಳಿದ ದೇವತೆಗಳ ಪ್ರಾಣ ಪ್ರತಿಷ್ಠಾಪನೆಯ 9ನೇ ವಾರ್ಷಿಕೋತ್ಸವ ಭಾನುವಾರ ನಡೆಯಿತು.</p>.<p>ಭಾರತ ಹುಣ್ಣಿಮೆಯ ಶುಭ ದಿನದಂದು ನಡೆದ ಧಾರ್ಮಿಕ ಕೈಂಕರ್ಯಗಳು ಪಟ್ಟಣದಲ್ಲಿ ಭಕ್ತಿಲೋಕ ಸೃಷ್ಟಿಸಿದ್ದವು. ಶನಿವಾರ ಮತ್ತು ಭಾನುವಾರ ಎರಡೂ ದಿನ ಭಕ್ತರ ದಂಡು ದೇವಸ್ಥಾನಕ್ಕೆ ಹರಿದು ಬಂತು. </p>.<p>ಭಾನುವಾರ ಬೆಳಗಿನ ಜಾವ 5 ಗಂಟೆಗೆ ರುದ್ರಾಭಿಷೇಕ ಸೇರಿದಂತೆ ಸಕಲ ಧಾರ್ಮಿಕ ವಿಧಿಗಳು ಆರಂಭವಾದವು. ಪ್ರಮುಖ ಘಟ್ಟ ಗುಗ್ಗಳೋತ್ಸವದಲ್ಲಿ 15 ಜನರು ಶುಭ್ರ ವಸ್ತ್ರಧಾರಿಗಳಾಗಿ ಕೈಯಲ್ಲಿ ಕುಂಭಗಳನ್ನು ಹಿಡಿದು ಶ್ರದ್ಧೆಯಿಂದ ಭಾಗಿಯಾದರು. ಸವಣೂರಿನ ನಾಗಪ್ಪ ಕುಂಬಾರ ತಂಡದ ವೀರಗಾಸೆಯ ನಿನಾದ ಪಟ್ಟಣದ ತುಂಬ ಹರಡಿತ್ತು.</p>.<p>ಭಕ್ತರು ಪಲ್ಲಕ್ಕಿ ಹೊತ್ತು ಸಾಗಿದರು. ಪ್ರತಿ ಮನೆ ಎದುರು ಪಲ್ಲಕ್ಕಿ ಬಂದಾಗ ಭಕ್ತರು ನೀರು ಹಾಕಿ ಆರತಿ ಮಾಡಿ ಭಕ್ತಿ ಸೇವೆ ಸಲ್ಲಿಸಿದರು. ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಗೆ ಮೆರುಗು ಮೂಡಿಸಿದ್ದರು.</p>.<p>ದೇವಸ್ಥಾನದ ಆವರಣದಲ್ಲಿ ಪುರವಂತರ ವೀರಾವೇಶದ ನುಡಿ, ಒಡಪುಗಳನ್ನು ಭಕ್ತರು ಆಸಕ್ತಿಯಿಂದ ಆಲಿಸಿದರು. ಪುರವಂತರ ದಕ್ಷಿಣ ಬ್ರಹ್ಮ ಸಂವಾರ ಸನ್ನಿವೇಶ<br /> ಪ್ರದರ್ಶನ ಗಮನ ಸೆಳೆಯಿತು. ದೇವಸ್ಥಾನದಲ್ಲಿನ ಭದ್ರಕಾಳಿ, ಗಣೇಶ, ನಾಗದೇವತಾ, ಬಸವಣ್ಣ ಮೂರ್ತಿಗಳನ್ನು ಸಿಂಗರಿಸಲಾಗಿತ್ತು. ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>